ಪೌರತ್ವ ತಿದ್ದುಪಡಿ ಕಾಯ್ದೆ: ಬೀದಿಗಿಳಿದ ಮಮತಾ ಬ್ಯಾನರ್ಜಿ
ಕೋಲ್ಕತ್ತಾ, ಡಿ, 18 ಪಶ್ಚಿಮ ಬಂಗಾಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ
ಪ್ರತಿಭಟನೆ ಮುಂದುವರೆದಿದ್ದರೂ ಯಾವುದೇ
ಹೊಸ ಹಿಂಸಾಚಾರದ ಘಟನೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆದರೆ, ಮಂಗಳವಾರ ರಾತ್ರಿ
ಹೌರಾ ಜಿಲ್ಲೆಯ ಸಂಕ್ರೈಲ್ ಪ್ರದೇಶದಲ್ಲಿ ಚಳವಳಿಗಾರರ ಗುಂಪು ಕಚ್ಚಾ ಬಾಂಬ್ ಎಸೆದಿದ್ದರಿಂದ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಇತರೆ ಇಬ್ಬರು ಸಿಬ್ಬಂದಿ ಗಾಯಗೊಂಡಿದ್ದಾರೆ.ಹೌರಾ ನಗರ ಪೊಲೀಸ್
ಉಪ ಪೊಲೀಸ್ ಆಯುಕ್ತ ಅಜೀತ್ ಸಿಂಗ್ ಯಾದವ್ ಅವರ ಎರಡೂ
ಕಾಲುಗಳಿಗೆ ಬಾಂಬ್ ಸ್ಫೋಟದಿಂದ ಗಾಯವಾಗಿ ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ
ಮಮತಾ ಬ್ಯಾನರ್ಜಿ ಅವರು ಬುಧವಾರ ಕೋಲ್ಕತ್ತಾದ ಎಸ್ಪ್ಲನೇಡ್ ಪ್ರದೇಶದಲ್ಲಿ ಹೌರಾ ಮೈದಾನದಿಂದ ಡೊರಿನಾ
ಕ್ರಾಸಿಂಗ್ ವರೆಗೆ ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನಾ
ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.ಇದೆ 13 ರಿಂದ ರಾಜ್ಯದಲ್ಲಿ ಪೌರತ್ವ ಕಾಯಿದೆ ವಿರುದ್ಧ ಪ್ರತಿಭಟನೆ ನಡೆಯುತ್ತಲಿದೆ.ಆದರೂ ಪೊಲೀಸರು ರಾಜ್ಯಾದ್ಯಂತ ಬಿಗಿಭದ್ರತೆ ಕೈಗೊಂಡಿದ್ದಾರೆ.
ಪ್ರತಿಭಟನೆಯಿಂದಾಗಿ ಪಶ್ಚಿಮ ಬಂಗಾಳದ ಮೂಲಕ ಹಾದುಹೋಗುವ ಹಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 