ಪೌರತ್ವ ತಿದ್ದುಪಡಿ ಮಸೂದೆ: ಸಂವಿಧಾನದ ಮೇಲಿನ ದೊಡ್ಡ ಆಕ್ರಮಣ
ನವದೆಹಲಿ, ಡಿ 11: ಪೌರತ್ವತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ದೊಡ್ಡ ಆಕ್ರಮಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಭಾರತವನ್ನು ಜಾತಿ ಧರ್ಮದ ಆಧಾರದ ಮೇಲೆ ವಿಭಜನೆ ಮಾಡಲು ಹೊರಟಿದೆ ಎಂದು ಪ್ರತಿಪಕ್ಷಗಳು ದೂರಿವೆ.
ರಾಜ್ಯಸಭೆಯಲ್ಲಿ ಮಸೂದೆಯ ಬಗ್ಗೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಉಪನಾಯಕ ಆನಂದ್ ಶರ್ಮಾ ಅವರು, ಮಸೂದೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿದೆ ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಅಗ್ರಹಪಡಿಸಿದರು.
ಸರ್ಕಾರ ಏಕೆ ಇಷ್ಟು ಅವಸರದಲ್ಲಿದೆ? ಇದನ್ನೂ ಸಂಸದೀಯ ಸಮಿತಿ ಪರಶೀಲನೆಗೆ ಕಳುಹಿಸಬಹುದಿತ್ತು, ಆಗ ಈ ಮಸೂದೆಯನ್ನೂ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಬಹುದಿತ್ತು ಈ ಮಸೂದೆ ಅಂಗೀಕಾರವಾಗದಿದ್ದಲ್ಲಿ, ದೇಶ, ಆಕಾಶವೇನು ಕಳಚಿ ಬೀಳುತ್ತಿರಲಿಲ್ಲವಲ್ಲ ಎಂದು ತೀವ್ರವಾಗಿ ಸರ್ಕಾರದ ನಡೆಯನ್ನೂ ಅವರು ಬಲವಾಗಿ ತರಾಟೆಗೆ ತೆಗೆದುಕೊಂಡರು.
ನಾವು ಈ ಮಸೂದೆಯನ್ನು ಬೆಂಬಲಿಸದಿರಲು ಮುಖ್ಯ ಕಾರಣ ರಾಜಕೀಯವಲ್ಲ, ಬದಲಿಗೆ ಸಾಂವಿಧಾನಿಕ ಮತ್ತು ನೈತಿಕತೆ ಎಂದು ಶರ್ಮಾ ಹೇಳಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 