ಪೌರತ್ವ ತಿದ್ದುಪಡಿ ಮಸೂದೆ: ಸಂವಿಧಾನದ ಮೇಲಿನ ದೊಡ್ಡ ಆಕ್ರಮಣ
ನವದೆಹಲಿ, ಡಿ 11: ಪೌರತ್ವತಿದ್ದುಪಡಿ ಮಸೂದೆ ಸಂವಿಧಾನದ ಮೇಲಿನ ದೊಡ್ಡ ಆಕ್ರಮಣ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಭಾರತವನ್ನು ಜಾತಿ ಧರ್ಮದ ಆಧಾರದ ಮೇಲೆ ವಿಭಜನೆ ಮಾಡಲು ಹೊರಟಿದೆ ಎಂದು ಪ್ರತಿಪಕ್ಷಗಳು ದೂರಿವೆ.
ರಾಜ್ಯಸಭೆಯಲ್ಲಿ ಮಸೂದೆಯ ಬಗ್ಗೆ ಅಸಮಾಧಾನ ಹೊರಹಾಕಿದ ಕಾಂಗ್ರೆಸ್ ಉಪನಾಯಕ ಆನಂದ್ ಶರ್ಮಾ ಅವರು, ಮಸೂದೆಯಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿದೆ ಅವುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಬೇಕು ಎಂದು ಅಗ್ರಹಪಡಿಸಿದರು.
ಸರ್ಕಾರ ಏಕೆ ಇಷ್ಟು ಅವಸರದಲ್ಲಿದೆ? ಇದನ್ನೂ ಸಂಸದೀಯ ಸಮಿತಿ ಪರಶೀಲನೆಗೆ ಕಳುಹಿಸಬಹುದಿತ್ತು, ಆಗ ಈ ಮಸೂದೆಯನ್ನೂ ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ಮಂಡನೆ ಮಾಡಬಹುದಿತ್ತು ಈ ಮಸೂದೆ ಅಂಗೀಕಾರವಾಗದಿದ್ದಲ್ಲಿ, ದೇಶ, ಆಕಾಶವೇನು ಕಳಚಿ ಬೀಳುತ್ತಿರಲಿಲ್ಲವಲ್ಲ ಎಂದು ತೀವ್ರವಾಗಿ ಸರ್ಕಾರದ ನಡೆಯನ್ನೂ ಅವರು ಬಲವಾಗಿ ತರಾಟೆಗೆ ತೆಗೆದುಕೊಂಡರು.
ನಾವು ಈ ಮಸೂದೆಯನ್ನು ಬೆಂಬಲಿಸದಿರಲು ಮುಖ್ಯ ಕಾರಣ ರಾಜಕೀಯವಲ್ಲ, ಬದಲಿಗೆ ಸಾಂವಿಧಾನಿಕ ಮತ್ತು ನೈತಿಕತೆ ಎಂದು ಶರ್ಮಾ ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 