ಸೊಗಡು ತಿಳಿಸಲು ಪೌರತ್ವ ತರಬೇತಿ ಶಿಬಿರ ತುಂಬಾ ಉಪಯುಕ್ತವಾಗಿದೆ
Citizenship training camp is very useful for conveying the message
ವಿಜಯಪುರ 20: ಜೀವನವನ್ನು ಪರಿಪೂರ್ಣಗೊಳಿಸಲು ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗೆ ಗ್ರಾಮೀಣ ಭಾಗದ ಸೊಗಡು ತಿಳಿಸಲು ಪೌರತ್ವ ತರಬೇತಿ ಶಿಬಿರ ತುಂಬಾ ಉಪಯುಕ್ತವಾಗಿದೆ ಎಂದು ಡಯಟ್ ಪ್ರಾಚಾರ್ಯೆ ಉಮಾದೇವಿ ಸೊನ್ನದ ಹೇಳಿದ್ದಾರೆ.
ಗುರುವಾರ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಬಳಿ ಇರುವ ಸದ್ಗುರು ಸಚ್ಚಿದಾನಂದ ಮಹಾರಾಜಯರ ಆಶ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಸಿದ್ಧೇಶ್ವರ ಸ್ವಾಮಜಿ ಶಿಕ್ಷಣ ಮಹಾವಿದ್ಯಾಲಯ ಮತ್ತು ಎನ್.ಎಸ್.ಎಸ್ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಅವರ ಮಾತನಾಡಿದರು. ಗ್ರಾಮೀಣ ಭಾಗದ ಸಂಸ್ಕೃತಿಯ ಬಗ್ಗೆ ತಿಳಿಯಲು ಇಂಥ ಶಿಬಿರಗಳು ಅನುಕೂಲವಾಗಿವೆ. ಅಲ್ಲದೇ, ನಗರದ ಜೊತೆಗೆ ಗ್ರಾಮೀಣ ಸೊಗಡನ್ನು ಅರ್ಥ ಮಾಡಿಕೊಂಡು ದೇಶದ ಉತ್ತಮ ನಾಗರಿಕನ್ನಾಗಿ ಮಾಡಲು ಸಹಕಾರಿಯಾಗಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಇಟ್ಟಂಗಿಹಾಳ ಸಮತಾ ನಿಕೇತನ ಚಾರಿಟೇಬಲ್ ಟ್ಸಸ್ಟ್ ಸದಸ್ಯ ಎಂ. ಎಂ. ಬಿರಾದಾರ, ಕಾಲೇಜಿನ ಪ್ರಾಚಾರ್ಯೆ ಡಾ. ಬಿ ವೈ ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ, ಆಶ್ರಮದ ಚೇರಮನ್ ಡಾ. ಎಂ. ಎಸ್. ಹಿರೇಮಠ, ಏನ್.ಎಸ್.ಎಸ್ ಸಂಯೋಜಕ ಡಾ. ಬಿ. ಎಸ್. ಹಿರೇಮಠ ಮುಂತಾದವರು ಉಪಸ್ಥಿತರಿದ್ದರು. ಧನ್ಯವಾದಗಳು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 