ಪೌರಕಾಮರ್ಿಕರ ಧರಣಿ ಸತ್ಯಾಗ್ರಹ
ಲೋಕದರ್ಶನ ವರದಿ
ಘಟಪ್ರಭಾ 23: ವೇತನ ನೀಡಬೇಕೆಂದು ಒತ್ತಾಯಿಸಿ ಗುರುವಾರ ಪ್ರಾರಂಭಗೊಂಡ ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತ ಸಿಬ್ಬಂದಿ ಹಾಗೂ ನೌಕರರ ಧರಣಿ ಮೂರನೆ ದಿನಕ್ಕೆ ಕಾಲಿಟ್ಟಿದ್ದು, ನೌಕರರು ಪ.ಪಂ ಕಾಯರ್ಾಲಯದ ಎದುರು ಧರಣಿ ನಡೆಸುತ್ತಿದ್ದರು.
ಮಂಜೂರಾದ ಹುದ್ದೆಗಳಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಪೌರಕಾಮರ್ಿಕರನ್ನು ಹೊರತುಪಡಿಸಿ ಉಳಿಯುವ ಹುದ್ದೆಗಳಿಗೆ ವಿಶೇಷ ನೇಮಕಾತಿ ನಿಯಮಗಳನ್ವಯ ನಿಗದಿಪಡಿಸಿರುವ ಅರ್ಹತಾ ಅವಧಿಯನ್ನು ಪೂರ್ಣಗೊಳಿಸಿರುವದನ್ನು ದೃಡಪಡಿಸಿಕೊಂಡು ಕನಿಷ್ಠ ವೇತನ ಕಾಯ್ದೆಯನ್ವಯ ವೇತನವನ್ನು ಮಹಾನಗರ ಪಾಲಿಕೆ/ ನಗರ ಸ್ಥಳೀಯ ಸಂಸ್ಥೆಗಳಿಂದ ನೇರ ಪಾವತಿಗೆ ಕ್ರಮವಹಿಸುವದು ಎಂದು ನಿದರ್ೇಶಕರು ಪೌರಾಡಳಿತ ನಿದರ್ೇಶನಾಲಯ ಬೆಂಗಳೂರು ಇವರು ಅದೇಶ ಮಾಡಿರುವದನ್ನು ಪ.ಪಂ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಕೆ. ಬಿ. ಪಾಟೀಲ ಧರಣಿ ನಿರತ ಸಿಬ್ಬಂದಿವರಿಗೆ ತಿಳಿಸಿದ ಬಳಿಕ ಮಲ್ಲಾಪೂರ ಪ.ಪಂ ಸಿಬ್ಬಂದಿಯವರು ಧರಣಿಯನ್ನು ಶನಿವಾರ ಮದ್ಯಾಹ್ನ ಅಂತ್ಯಗೊಳಿಸಿದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯರಾದ ಮಲ್ಲು ಕೋಳಿ. ಸಲೀಮ ಕಬ್ಬೂರ, ಇಮ್ರಾನ ಬಟಕುಕರ್ಿ, ಪ್ರವೀಣ ಮಟಗಾರ, ಪಟ್ಟಣದ ಹಿರಿಯರಾದ ಡಿ.ಎಮ್ ದಳವಾಯಿ, ಸುರೇಶ ಪೂಜಾರಿ, ಜಿ.ಎಸ್.ರಜಪೂತ, ವೀರಭದ್ರ ಗಂಡವ್ವಗೋಳ, ಪರಸರಾಮ ಗೋಕಾಕ, ಅಪ್ಪಾಸಾಬ ಮುಲ್ಲಾ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 