ಇಂಡಿ ತಾಲೂಕ ಪಂಚಾಯತಿಯಲ್ಲಿ ಸ್ವಚ್ಛ ಶನಿವಾರ ಅಭಿಯಾನ
Clean Saturday campaign in Indi Taluka Panchayat
ಇಂಡಿ 05: ತಾಲೂಕ ಪಂಚಾಯತಿ ಆವರಣದಲ್ಲಿ ಸ್ವಚ್ಛ ಶನಿವಾರ ಅಭಿಯಾನ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಇಂಡಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಡಾ ಭೀಮಾಶಂಕರ ಕನ್ನೂರ ಅವರು ಚಾಲನೆ ನೀಡಿದರು.
ತಿಂಗಳ ಮೊದಲನೇ ಶನಿವಾರ ತಾಲೂಕಿನ ಕಚೇರಿ ಒಳಗೆ ಮತ್ತು ಹೊರಗೆ ಸ್ವಚ್ಚತೆ ಕಾಪಾಡುವ ಉದ್ದೇಶದಿಂದ ಸ್ವತಃ ಕಾರ್ಯನಿರ್ವಾಹಕ ಅಧಿಕಾರಿಗಳು ಅವರು ಪೊರಕೆ ಹಿಡಿದು ಸಿಬ್ಬಂದಿಯೊಂದಿಗೆ ಕಚೇರಿ ಆವರಣವನ್ನು ಸ್ವಚ್ಛಗೊಳಿಸಿದರು. ಜನಸ್ನೇಹಿ ಕಚೇರಿ ವಾತಾವರಣ ನಿರ್ಮಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನ ಮಾಡಲಾಗುತ್ತಿದೆ.ಪಂಚಾಯತ ರಾಜ್ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಾಶ ರಾಠೋಡ, ತಾಲೂಕ ಯೋಜನಾಧಿಕಾರಿಗಳು ನಂದೀಪ ರಾಠೋಡ, ವ್ಯವಸ್ಥಾಪಕರು ಮುರುಗೇಶ ನಾರಾಯಣಪುರ, ಜಬ್ಬರಅಲಿ ಹಳ್ಳಿ, ಪ್ರಭಾಕರ ಪೂಜಾರಿ , ಸುಮಿತ್ರಾ ನಾಯಕ, ಚಿತ್ರಾವತಿ ಪೂಜಾರಿ, ವಿಜಯಾ ತಳವಾರ, ಮಲ್ಲಿಕಾರ್ಜುನ ಪಾಟೀಲ, ತಾಂತ್ರಿಕ ಸಂಯೋಜಕರು ಸಾಹಿಲ್ ದನಶೆಟ್ಟಿ ,ಎಂ ಐ ಎಸ್ ಸಂಯೋಜಕರು ಹನುಮಂತ ಮೇಟಿ, ಐಇಸಿ ಸಂಯೋಜಕರು ರಾಮಗೌಡ ಸರಬಡಗಿ, ಬಾಬು ಶೇಕ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 