ಇಂಡಿ ತಾಲೂಕ ಪಂಚಾಯತಿಯಲ್ಲಿ ಸ್ವಚ್ಛ ಶನಿವಾರ ಅಭಿಯಾನ
Clean Saturday campaign in Indi Taluka Panchayat
ಇಂಡಿ 05: ತಾಲೂಕ ಪಂಚಾಯತಿ ಆವರಣದಲ್ಲಿ ಸ್ವಚ್ಛ ಶನಿವಾರ ಅಭಿಯಾನ ಹಾಗೂ ಸಸಿ ನೆಡುವ ಕಾರ್ಯಕ್ರಮಕ್ಕೆ ಇಂಡಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಡಾ ಭೀಮಾಶಂಕರ ಕನ್ನೂರ ಅವರು ಚಾಲನೆ ನೀಡಿದರು.
ತಿಂಗಳ ಮೊದಲನೇ ಶನಿವಾರ ತಾಲೂಕಿನ ಕಚೇರಿ ಒಳಗೆ ಮತ್ತು ಹೊರಗೆ ಸ್ವಚ್ಚತೆ ಕಾಪಾಡುವ ಉದ್ದೇಶದಿಂದ ಸ್ವತಃ ಕಾರ್ಯನಿರ್ವಾಹಕ ಅಧಿಕಾರಿಗಳು ಅವರು ಪೊರಕೆ ಹಿಡಿದು ಸಿಬ್ಬಂದಿಯೊಂದಿಗೆ ಕಚೇರಿ ಆವರಣವನ್ನು ಸ್ವಚ್ಛಗೊಳಿಸಿದರು. ಜನಸ್ನೇಹಿ ಕಚೇರಿ ವಾತಾವರಣ ನಿರ್ಮಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದರು.
ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛ ಶನಿವಾರ ಅಭಿಯಾನ ಮಾಡಲಾಗುತ್ತಿದೆ.ಪಂಚಾಯತ ರಾಜ್ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಾಶ ರಾಠೋಡ, ತಾಲೂಕ ಯೋಜನಾಧಿಕಾರಿಗಳು ನಂದೀಪ ರಾಠೋಡ, ವ್ಯವಸ್ಥಾಪಕರು ಮುರುಗೇಶ ನಾರಾಯಣಪುರ, ಜಬ್ಬರಅಲಿ ಹಳ್ಳಿ, ಪ್ರಭಾಕರ ಪೂಜಾರಿ , ಸುಮಿತ್ರಾ ನಾಯಕ, ಚಿತ್ರಾವತಿ ಪೂಜಾರಿ, ವಿಜಯಾ ತಳವಾರ, ಮಲ್ಲಿಕಾರ್ಜುನ ಪಾಟೀಲ, ತಾಂತ್ರಿಕ ಸಂಯೋಜಕರು ಸಾಹಿಲ್ ದನಶೆಟ್ಟಿ ,ಎಂ ಐ ಎಸ್ ಸಂಯೋಜಕರು ಹನುಮಂತ ಮೇಟಿ, ಐಇಸಿ ಸಂಯೋಜಕರು ರಾಮಗೌಡ ಸರಬಡಗಿ, ಬಾಬು ಶೇಕ್, ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 