ವಿಧಾನಸಭಾ ಕ್ಷೇತ್ರದಾದ್ಯಂತ ಸ್ವಚ್ಛತಾ ಕಾರ್ಯಕ್ಕೆ ಚಾಲನೆ : ಆರ್. ವಿ. ದೇಶಪಾಂಡೆ
Cleanliness drive across the Assembly Constituency: R. V. Deshpande
ಲೋಕದರ್ಶನ ವರದಿ
ಕಾರವಾರ, ಮಾ.30: ಹಳಿಯಾಳ ವಿಧಾನ ಸಭಾ ಕ್ಷೇತ್ರದಾದ್ಯಂತ ಮಾರ್ಚ್ 30 ರಿಂದ ಏಪ್ರಿಲ್ 1 ರ ವರೆಗೆ ನಿರಂತರವಾಗಿ 3 ದಿನಗಳ ಕಾಲ ಸಂಪೂರ್ಣ ಸ್ವಚ್ಛತಾ ಕಾರ್ಯ ಆಯೋಜಿಸುವ ಮೂಲಕ ದೇಶದಲ್ಲೇ ವಿನೂತನ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಅವರು ಸೋಮವಾರ ಹಳಿಯಾಳ ದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಹಾಕಿಕೊಟ್ಟ ಸ್ವಚ್ಛತೆಯ ಹಾದಿಯಲ್ಲಿ ನಾವು ಸಾಗಬೇಕು. ಸ್ವಚ್ಛತೆಯ ಕೆಲಸಕ್ಕೆ ಪೂರ್ಣವಿರಾಮ ಇರಬಾರದು. ಸಾರ್ವಜನಿಕರ ಸಹಕಾರದೊಂದಿಗೆ ಪ್ರತಿ ಹಳ್ಳಿ, ಪಟ್ಟಣ, ಶೌಚಾಲಯ ಹಾಗೂ ಉದ್ಯಾನವನಗಳು ಸ್ವಚ್ಛವಾಗಿರಬೇಕು ಎಂದರು.
ಹಳಿಯಾಳ ವಿಧಾನ ಸಭಾ ಕ್ಷೇತ್ರದ ಹಳಿಯಾಳ ದಾಂಡೇಲಿ, ಜೋಯಿಡಾ ತಾಲೂಕುಗಳ ನಗರ, ಗ್ರಾಮ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ನಡೆಯಲಿದು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಹಕಾರದೊಂದಿಗೆ ಈ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ತಹಸೀಲ್ದಾರ್ ಫಿರೋಜ್ ಷಾ ಮಾತನಾಡಿ, ಗಾಂಧೀಜಿಯವರ ಸ್ವಚ್ಛತೆಯೇ ಸೇವೆ ಮತ್ತು ಬಸವಣ್ಣನವರ ಕಾಯಕವೇ ಕೈಲಾಸ ಎಂಬ ಧ್ಯೇಯವಾಕ್ಯಗಳೊಂದಿಗೆ, ಶಾಸಕರ ಸೂಚನೆಯ ಮೇರೆಗೆ ಹಳಿಯಾಳ ತಾಲೂಕಿನ ಸಂಪೂರ್ಣ ಸ್ವಾಸ್ಥ್ಯಕ್ಕಾಗಿ ಈ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ. ಇದು ಕೇವಲ ಒಂದು ದಿನದ ಕಾರ್ಯಕ್ರಮವಲ್ಲ, ನಿರಂತರವಾಗಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುವ ಗುರಿಯನ್ನು ಹೊಂದಿದ್ದು, ಹಳಿಯಾಳ ತಾಲೂಕಿನ ಸಾರ್ವಜನಿಕರು ಈ ಅಭಿಯಾನಕ್ಕೆ ಸಂಪೂರ್ಣವಾಗಿ ಸಹಕರಿಸುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 