ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
Cleanliness program in the premises of the Hataragi Karimath
ಯಮಕನಮರಡಿ, 25 : ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಎರಡನೇ ದಿನ ಹತ್ತರಗಿಯ ಕಾರೀಮಠದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡು ಆವರಣವನ್ನು ಅಚ್ಚುಕಟ್ಟಾಗಿ ಸ್ವಚ್ಛಗೊಳಿಸಿದರು ಈ ಸಂದರ್ಭದಲ್ಲಿ ಸ್ಥಳೀಯರಾದ ಹನುಮಂತ ಗಾಡಿ ವಡ್ಡರ್ ಕಾಂಗ್ರೆಸ್ ಮುಖಂಡರು ಪಾಂಡುರಂಗ ಗಾಡಿ ವಡ್ಡರ್, ರವರು ಹಾಜರಿದ್ದು ಶಿಭಿರಾರ್ಥಿಗಳ ಸೇವೆಯನ್ನು ಮುಕ್ತ ಕಂಠದಿಂದ ಶ್ಲಾಗೀಸಿದರು.
ಅದರಂತೆ ಶಿಬಿರದಲ್ಲಿ ಮದ್ಯಾಹ್ನದ ನಂತರ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮವನ್ನು ನಿಮ್ಹಾನ್ಸ ನ ಎಪಿಡಿಮಿಯಾಲಜಿ ವಿಭಾಗ ಹಾಗೂ ಯುವ ಸ್ಪಂಧನ ಕೇಂದ್ರ ಬೆಳಗಾವಿ ಯುವ ಸಮಾಲೋಚಕರಾದ ಶ್ರೀ ಕುಮಾರ ಖೋತ,ಯುವ ಪರಿವರ್ತಕರಾದ ಸರಸ್ವತಿ ಗುರುಪಾದಗೋಳ ಹಾಗೂ ಡಿ.ಎ.ಎಸ್.ಎಪ್.ಬೆಳಗಾವಿಯ ಬಾಳಯ್ಯ ಮಠಪತಿ ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಪ್ರಾಯೋಗಿಕ ಚಟುವಟಿಕೆಗಳ ಮೂಲಕ ಜೀವನ ಕೌಶಲ್ಯಗಳನ್ನು ತಿಳಿಸಿಕೊಟ್ಟಿರುವುದು ವಿಶೇಷವಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕ ಎ.ಎ.ಕಿವಂಡಾ ವಹಿಸಿದ್ದರು. ಕಾರ್ಯಕ್ರಮ ಅಧಿಕಾರಿ ಬಿ.ಬಿ.ಕೊಡ್ಲಿ ಸಹ ಕಾರ್ಯಕ್ರಮ ಅಧಿಕಾರಿ ಎಸ್.ಆರ್ ತಬರಿ ಈ ಸಂದರ್ಭದಲ್ಲಿ ಹಾಜರಿದ್ದರು. ಕಾರ್ಯಮವನ್ನು ಶಿಭಿರಾರ್ಥಿಗಳೆ ಸಂಘಟಿಸಿ ನಿರೂಪಣೆ ಹಾಗೂ ವಂದನೆಗಳನ್ನು ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 