ಕಾರವಾರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ
Cleanup program at Karwar beach
ಲೋಕದರ್ಶನ ವರದಿ
ಕಾರವಾರ, ಜೂ.2 :- ವಿಶ್ವ ಪರಿಸರ ದಿನಾಚರಣೆ 2026 ರ ಪ್ರಯುಕ್ತ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ, ನಗರಸಭೆ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ ಕಾರವಾರ ಕಡಲ ತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಮಂಗಳವಾರ ಹಮ್ಮಿಕೊಳ್ಳಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಪರಿಸರದ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಯಿತು. ಸಾರ್ವಜನಿಕರಿಗೆ ಮತ್ತು ಪ್ರವಾಸಿಗರಿಗೆ ಕಡಲ ತೀರದಲ್ಲಿ ಕಸವನ್ನು ಎಲ್ಲೆಂದರಲ್ಲಿ ಹಾಕದೇ ಕೇವಲ ಕಸ ಸಂಗ್ರಹಣಾ ತೊಟ್ಟಿಗಳಲ್ಲಿ ಹಾಕಲು ಜಾಗೃತಿ ಮೂಡಿಸಲಾಯಿತು.
ಸ್ವಚ್ಛತಾ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ನಗರಸಭೆ ಪೌರಾಯುಕ್ತ ಜಗದೀಶ್ ಹುಲಗಜ್ಜಿ, ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು, ಗ್ರಾಸಿಮ್ ಇಂಡಸ್ಟ್ರೀಸ್ ಲಿ. ಬಿಣಗಾ ಕೈಗಾರಿಕೆಯ ಅಧಿಕಾರಿ ವಿಕ್ರಮ್ ಮಣಿ ಹಾಗೂ ಕಾರ್ಮಿಕರು ಉಪಸ್ಥಿತರಿದ್ದು, ಕಡಲ ತೀರದ ಸ್ವಚ್ಛತೆಯನ್ನು ಕೈಗೊಂಡು, ಸ್ವಚ್ಛತಾ ಕಾರ್ಯಕ್ರಮದ ಯಶಸ್ವಿಗೆ ಕೈಜೋಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 