ಸರ್ಕಾರಿ ಜಾಗ ಒತ್ತುವರಿ ತೆರವು: ಜಿಲ್ಲಾಡಳಿತದಿಂದ ದಿಟ್ಟ ಕ್ರಮ
Clearance of encroachment on government land: Bold action by the district administration
ಲೋಕದರ್ಶನ ವರದಿ
ಬಳ್ಳಾರಿ 16: ನಗರದ ವಿವಿಧೆಡೆ ಹಲವು ವರ್ಷಗಳಿಂದ ಅಕ್ರಮವಾಗಿ ಒತ್ತುವರಿಯಾಗಿದ್ದ ಸರ್ಕಾರಿ ಜಾಗವನ್ನು ಜಿಲ್ಲಾಡಳಿತವು ಕಾರ್ಯಾಚರಣೆಯ ಮೂಲಕ ಗುರುವಾರ ತೆರವುಗೊಳಿಸಿದೆ. ನಗರದ ಅವಂಭಾವಿಯ ದೇವಸ್ಥಾನದ ಹಿಂಭಾಗದಲ್ಲಿ ಒತ್ತುವರಿ ಮಾಡಿ ತಡೆಗೋಡೆ ನಿರ್ಮಿಸಿದ್ದ ರಸ್ತೆ ಸೇರಿದಂತೆ 22 ಸೆಂಟ್ಸ್ ವಿಸ್ತೀರ್ಣದ ಸರ್ಕಾರಿ ಜಾಗ ಅಧಿಕಾರಿಗಳು ವಶಕ್ಕೆ ಪಡೆಯಲಾಯಿತು. ತೆರವುಗೊಳಿಸಿದ ಜಾಗಕ್ಕೆ ಅಳವಡಿಸಿ ‘ಸರ್ಕಾರಿ ಸ್ವತ್ತು' ಎಂಬ ನಾಮಫಲಕ ಹಾಕಲಾಯಿತು. ಮುಂಜಾನೆಯೇ ಸ್ಥಳಕ್ಕೆ ಆಗಮಿಸಿದ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜೆಸಿಬಿ ಯಂತ್ರಗಳ ಮೂಲಕ ನೆಲಸಮ ಮಾಡಿದರು.
ಬಳಿಕ ನಲ್ಲಚೇರುವು ಪ್ರದೇಶದಲ್ಲಿ ಒತ್ತುವರಿಯಾಗಿದ್ದ 5.5 ಎಕರೆ ಜಮೀನು ಸರ್ಕಾರದ ಸ್ವತ್ತು ಎಂದು ನಾಮಫಲಕ ನೆಡಲಾಯಿತು. ನಂತರ ಭತ್ರಿ ಕಾಲೋನಿಯ ಈಶ್ವರ ದೇವಸ್ಥಾನದ ಬಳಿ ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್ ಮತ್ತು ಮನೆ ತೆರವು ಕಾರ್ಯಾಚರಣೆ ಮಾಡಲಾಯಿತು. ಕಾರ್ಯಾಚರಣೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ., ಬಳ್ಳಾರಿ ತಾಲ್ಲೂಕು ತಹಶೀಲ್ದಾರರಾದ ಟಿ.ರೇಖಾ ಸೇರಿದಂತೆ ಡಿಡಿಎಲ್ಆರ್, ಎಡಿಎಲ್ಆರ್ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 