ಡೆಹ್ರಾಡೂನ್ ನಲ್ಲಿ ಮೇಘಸ್ಫೋಟ: ನೀರಿನ ರಭಸಕ್ಕೆ ಕೊಚ್ಚಿಹೋದ ಮನೆ, ಅಂಗಡಿ-ಮುಂಗಟ್ಟು
Cloudburst in Dehradun: House, shop and store washed away by water
ಡೆಹ್ರಾಡೂನ್: ಭಾರೀ ಮೇಘಸ್ಫೋಟದಿಂದಾಗಿ ಮನೆಗಳು, ಕಾರು, ಅಂಗಡಿ ಮುಂಗಟ್ಟು ಕೊಚ್ಚಿಕೊಂಡು ಹೋಗಿರುವ ಘಟನೆ ಡೆಹ್ರಾಡೂನ್ ನಲ್ಲಿ ನಡೆದಿದ್ದು, ನಾಲ್ವರು ಸಾವನ್ನಪ್ಪಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆಗೆ ಸೇತುವೆಗಳು ಹಾನಿಗೊಂಡಿದ್ದು, ಸಹಸ್ರಧಾರ ಮತ್ತು ಐಟಿ ಪಾರ್ಕ್ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ಮೇಘಸ್ಫೋಟದಿಂದ ಕಾರ್ಲಿಗಾಡ್ ನದಿ ತುಂಬಿ ಹರಿದ ಪರಿಣಾಮ ಸುತ್ತಮುತ್ತಲಿನ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ.
ನಿರಂತರ ಮಳೆಯಿಂದಾಗಿ ನದಿಗಳು ಉಕ್ಕಿ ಹರಿಯುತ್ತಿದ್ದು, ಮುಖ್ಯ ಸೇತುವೆಯೊಂದು ಕುಸಿದು ಬಿದ್ದಿದ್ದು, ನದಿ ಪ್ರದೇಶದ ಸುತ್ತಮುತ್ತ ಅಪಾರ ಆಸ್ತಿ-ಪಾಸ್ತಿ ನಷ್ಟ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಮೇಘ ಸ್ಫೋಟದಲ್ಲಿ ಭೂಕುಸಿತ ಸಂಭವಿಸಿದ್ದು, ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದ್ದು, ನೂರಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಪುಷ್ಕರ್ ಅವರಿಗೆ ಕರೆ ಮಾಡಿ, ಮಾಹಿತಿ ಪಡೆದಿದ್ದು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿರುವುದಾಗಿ ವರದಿ ತಿಳಿಸಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 