ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪಧರ್ಾ ಕಾರ್ಯಕ್ರಮ
ಧಾರವಾಡ 01: ಧಾರವಾಡ ಶಹರ ವಲಯದ ಮದಾರಮಡ್ಡಿ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪಧರ್ಾ ಕಾರ್ಯಕ್ರಮ ಇಂದು ಕೆಪಿಇಎಸ್ ಶಾಲೆಯಲಿ ಜರುಗಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎ. ಖಾಜಿ ಅವರು ಉದ್ಘಾಟಿಸಿ ಮಾತನಾಡಿ, ಮಕ್ಕಳು ಅಂಕ ಗಳಿಕೆಗೆ ಸೀಮಿತವಾಗದೆ ಸಂಗೀತ, ನೃತ್ಯ, ಭಾಷಣ, ಪಠ್ಯೇತರ ಕ್ಷೇತ್ರಗಳಲ್ಲಿ ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದಶರ್ಿಸಬೇಕು. ಅಂತಹ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಸಕರ್ಾರ ಪ್ರೋತ್ಸಾಹಿಸುತ್ತಲಿದೆ ಎಂದರು. ಹಿರಿಯ ವಕೀಲರಾದ ಬಿ.ಎಸ್. ಸೋಮಾಪೂರ ಮಾತನಾಡಿ, ಮಕ್ಕಳಲ್ಲಿನ ವಿಶೇಷ ಪ್ರತಿಭೆ ಹೊರಹೊಮ್ಮಲು ಸಕರ್ಾರ ಇಂತಹ ವೇದಿಕೆಗಳನ್ನು ನಿಮರ್ಿಸಿರುವುದು ಸಹಕಾರಿಯಾಗಿದೆ. ವಿಜೇತ ಮಕ್ಕಳು ತಾಲೂಕು, ಜಿಲ್ಲೆ ಮತ್ತು ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಲು ಅವಕಾಶವಿದೆ ಎಂದು ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಮಲ್ಲಮ್ಮ ಜಿ. ಪಾಟೀಲ, ಲತಾ ಮುಳ್ಳೂರ, ಆರ್.ಬಿ. ಲಿಂಗದಾಳ, ಎಸ್.ಬಿ. ಮುತವಾಡ, ಬಿಆರ್ಪಿ ವೈ.ಎಚ್. ಪಾಟೀಲ, ಡಿ.ವ್ಹಿ. ಸಜ್ಜನ್ ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 