ಸಹಕಾರಿ ಸಂಸ್ಥೆ ಕಾರ್ಯ ಶ್ಲಾಘನೀಯ: ದೊಡ್ಡಗೌಡರ
Co-operative work commendable: Doddagowdar
ನೇಸರಗಿ 20: ದಿನನಿತ್ಯದ ಬಳಕೆ ವಸ್ತುಗಳು ಗ್ರಾಮೀಣ ಮಟ್ಟದಲ್ಲಿ ಸಿಗುವಂತೆ ಮಾಡಿರುವ ಸಹಕಾರಿ ಸಂಸ್ಥೆ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಹೇಳಿದರು.
ಸಮೀಪದ ದೇಶನೂರ ಗ್ರಾಮದ ವಿವಿದ್ದೋದ್ದೇಶ ಪ್ರಾಥಮಿಕ ಕೃಷಿ ಸಹಕಾರಿ ಸಂಘದ ವತಿಯಿಂದ ನೂತನ ಕಟ್ಟಡ, ಹಳ್ಳಿ ಮಾರ್ಟ (ಮಾರಾಟ ಕೇಂದ್ರ)ನ್ನು ದಿ. 18 ರಂದು ಉದ್ಘಾಟಿಸಿ ಮಾತನಾಡಿ,ಹಳ್ಳಿಗಳಲ್ಲಿ ದಿನಸಿ ಬಳಕೆ ವಸ್ತುಗಳು ಸೇರಿದಂತೆ ವಿವಿಧ ವಸ್ತುಗಳ ಮಾರಾಟನ್ನು ಪ್ರಾರಂಭಿಸಿದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಸಾನಿಧ್ಯವನ್ನು ಕಿತ್ತೂರ ಮಡಿವಾಳ ರಾಜಯೋಗಿದ್ರ ಸ್ವಾಮೀಜಿ ವಹಿಸಿದ್ದರು. ಅಧ್ಯಕ್ಷತೆಯನ್ನು ಪಿಕೆಪಿಎಸ್ ಅಧ್ಯಕ್ಷ ಬಸವರಾಜ ಕೇದಾರಿ ವಹಿಸಿದ್ದರು. ಗ್ರಾ.ಪಂ ಅಧ್ಯಕ್ಷೆ ಸುರೇಖಾ ಕೇದಾರಿ, ಎಂ.ಡಿ.ನಂದೆನ್ನವರ, ವಿ.ಬಿ.ಗಿರನವರ, ವಾಯ್.ಆಯ್.ಮತ್ತಿಕೊಪ್ಪ, ರವಿರಾಜ ಇನಾಂದಾರ, ಜಿತೇಂದ್ರಕುಮಾರ, ಶ್ರೀಶೈಲ ಕಮತಗಿ, ಅಡಿವೆಪ್ಪ ಹೊಸಮನಿ, ಈರಣ್ಣ ವಾರದ, ಇನ್ನಿತರರು ಇದ್ದರು.
ನಾಗರಾಜ ಮುಚ್ಚಂಡಿ ನಿರೂಪಿಸಿದರು. ಸಂತೋಷ ತಿಳಗಂಜಿ ವಂದಿಸಿದರು.
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ 