ಹೊಲದಲ್ಲಿ ನೇಗಿಲು ಹೊಡೆಯುವಾಗ ಗಾಯಗೊಂಡ ನಾಗರಹಾವು ರಕ್ಷಣೆ: ಚಿಕಿತ್ಸೆ ನೀಡಿ ಅರಣ್ಯಕ್ಕೆ ಬಿಡುಗಡೆ
Cobra injured while plowing in field rescued: treated and released into the forest
ಮುಂಡಗೋಡ : ತಾಲೂಕಿನ ಮೂಡಸಾಲಿ ಗ್ರಾಮದ ಕೃಷಿ ಭೂಮಿಯಲ್ಲಿ ನೇಗಿಲು ಹೊಡೆಯುವ ವೇಳೆ ನಾಗರಹಾವು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಘಟನೆ ಸ್ಥಳಕ್ಕೆ ತಕ್ಷಣವೇ ಸ್ಥಳೀಯ ಗಸ್ತು ವನಪಾಲಕ್ ಮುತ್ತುರಾಜ ಹಳ್ಳಿ ಧಾವಿಸಿ, ಗಾಯಗೊಂಡ ನಾಗರಹಾವನ್ನು ಸುರಕ್ಷಿತವಾಗಿ ಕೈಸೇರಿಸಿಕೊಂಡು, ಮುಂಡಗೋಡ ಪಶುವೈದ್ಯ ಆಸ್ಪತ್ರೆಯ ಕಡೆಗೆ ಕೊಂಡೊಯ್ದರು. ಪಶುವೈದ್ಯರಲ್ಲಿ ತುರ್ತು ಚಿಕಿತ್ಸೆ ನೀಡಲಾಗಿದ್ದು, ನಾಗರಹಾವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು ಯಾವುದೇ ಅಪಾಯವಿಲ್ಲವೆಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಸಲಹೆಯ ಮೇರೆಗೆ ಚಿಕಿತ್ಸೆ ಪೂರ್ಣಗೊಂಡ ನಂತರ ನಾಗರಹಾವನ್ನು ಮರಳಿ ಅರಣ್ಯ ವ್ಯಾಪ್ತಿಗೆ ಸುರಕ್ಷಿತವಾಗಿ ಬಿಡಲಾಯಿತು. ಈ ಕಾರ್ಯಾಚರಣೆಯಲ್ಲಿ ಸಮಾಜ ಸೇವಕರಾದ ರಾಜು ಗುಬ್ಬಕ್ಕನವರ, ಸಂತೋಷ ಸಣ್ಣಮನಿ, ಗಸ್ತು ವನಪಾಲಕರಾದ ಸಾಗರ ಕೊಣ್ಣೂರು, ಹಾಗು ಆಸ್ಪತ್ರೆ ಸಿಬ್ಬಂದಿಗಳು ಸಕ್ರಿಯವಾಗಿ ಪಾಲ್ಗೊಂಡು ಅಮೂಲ್ಯ ಸಹಕಾರ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 