ಡಿಸ್ಟಿಂಕ್ಷನ್ ಪಡೆದ ಕಾಲೇಜು ಪ್ರಾಚಾರ್ಯರು ವಿದ್ಯಾರ್ಥಿಗೆ ಭೇಟಿ
College principal visits student who received distinction
ಲೋಕದರ್ಶನ ವರದಿ
ಹೂವಿನಹಡಗಲಿ 21: ಪಟ್ಟಣದ ಸೊಪ್ಪಿನ ಕಾಳಮ್ಮನವರ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ 2025-26 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಗಳಿಸಿದ ತಮ್ಮ ಕಾಲೇಜಿನ ವಿದ್ಯಾರ್ಥಿನಿಯರ ಮನೆಗೆ ಪ್ರಾಚಾರ್ಯರು ತಮ್ಮ ಉಪನ್ಯಾಸಕ ಸಿಬ್ಬಂದಿಯೊಂದಿಗೆ ತೆರಳಿ ಸನ್ಮಾನಿಸಿ ವಿನೂತನ ಪ್ರಯೋಗಕ್ಕೆ ಮುನ್ನುಡಿ ಬರೆದರು. ಸತತ ಎರಡು ವರ್ಷಗಳ ಕಾಲ ತಮ್ಮ ಮಕ್ಕಳ ವಿಶೇಷವಾಗಿ ಹೆಣ್ಣು ಮಕ್ಕಳ ಸಾಧನೆಗೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹ ನೀಡಿರುವ ಪಾಲಕರ ಜೊತೆ ಮಕ್ಕಳಿಗೆ ಸನ್ಮಾನಿಸಿದರು.ಜೊತೆಗೆ ಅವರಿಗೆ ನೈತಿಕ ಸ್ಥೈರ್ಯ ತುಂಬಿದಂತೆ ಆಗುತ್ತದೆಎಂದು ಕಾಲೇಜಿನ ಪ್ರಾಂಶುಪಾಲ ಎ ಕೊಟ್ರಗೌಡ ಅಭಿಮತ ವ್ಯಕ್ತಪಡಿಸಿದರು.ಕಾಲೇಜಿನ ಡಿಸ್ಟಿಂಕ್ಷನ್ ಪಡೆದಿರುವ ಒಟ್ಟು 21 ವಿದ್ಯಾರ್ಥಿನಿಯರ ಮನೆಗೆ ತೆರಳಿ ಅಭಿನಂದನ ಪತ್ರ ನೀಡಿ ಸನ್ಮಾನಿಸುತ್ತಿದ್ದೇವೆ ಎಂದು ಸಂತಸ ಹಂಚಿಕೊಂಡರು.ಉಪನ್ಯಾಸಕರಾದ ಬಸೆಟ್ಟಿ ಪ್ರಕಾಶ್, ಎ. ಶಿವಕುಮಾರ್, ದುಷ್ಯಂತ, ಶಂಕರ್, ವೀರೇಶ್, ಪರಶುರಾಮ ನಾಗೋಜಿ ಮಂಜುನಾಥ್ ಜೊತೆಗಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 