ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ
ಹಾವೇರಿ, ಅ 3: ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿ.ಎಚ್.ಕಾಲೇಜಿನಲ್ಲಿ ಬುಧವಾರ ಸಂಜೆ ನಡೆದಿದೆ. ಹಾವೇರಿ ತಾಲೂಕಿನ ದೇವಗೇರಿ ಗ್ರಾಮದ ಜಗದೀಶ್ ಯಲ್ಲಾಪುರ (19) ಎಂಬಾತ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ. ಜಿ.ಎಚ್. ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆತ ತನ್ನದೇ ಕಾಲೇಜಿನ ಯುವತಿಯನ್ನು ಪ್ರೇಮಿಸುತ್ತಿದ್ದ. ಆದರೆ, ಆಕೆ ಆತನ ಪ್ರೇಮ ನಿವೇದನೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 