ಒಳ ಮೀಸಲಾತಿ ಜಾರಿಗಾಗಿಆ 18 ಕ್ಕೆ ಬೆಂಗಳೂರು ಚಲೋ: ಮಾದಿಗ ದಂಡೋರ
Come to Bengaluru on August 18 to implement internal reservation: Madiga Dandora
ಒಳ ಮೀಸಲಾತಿ ಜಾರಿಗಾಗಿಆ 18 ಕ್ಕೆ ಬೆಂಗಳೂರು ಚಲೋ: ಮಾದಿಗ ದಂಡೋರ
ಬಳ್ಳಾರಿ 05: ರಂದು ಇತರೇ ರಾಜ್ಯಗಳಂತೆ ನಮ್ಮ ರಾಜ್ಯದಲ್ಲೂ ಕೂಡಲೇ ಸುಪ್ರಿಂ ಕೋರ್ಟಿನ ಆದೇಶದಂತೆ ಒಳ ಮೀಸಲಾತಿಯನ್ನು ಜಾರಿಗೆ ತನ್ನಿ ಎಂದು ಆ.18 ಕ್ಕೆ ಬೆಂಗಳೂರು ಚಲೋ ನಡೆಸಲಿದೆಂದು ಮಾದಿಗ ದಂಡೋರ ಹೇಳಿದೆ.ಸಂಘಟನೆಯ ಜಿಲ್ಲಾ ಅಧ್ಯಕ್ಷ ಎ. ನೆಟ್ಟಪ್ಪ, ರಾಜ್ಯ ಉಪಾಧ್ಯಕ್ಷ ಎ.ಕೆ.ಹುಲುಗಪ್ಪ, ದುರ್ಗಪ್ಪ ತಳವಾರ್ ಮೊದಲಾದವರು ನಗರದ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ. ಒಳ ಮೀಸಲಾತಿ ಹೋರಾಟಕ್ಕಾಗಿ ಜೀವನವನ್ನೇ ಮುಡುಪಿಟ್ಡ ಮಂದಕೃಷ್ಣ ಈ ಹೋರಾಟಕ್ಕೆ ಆಗಮಿಸಲಿದ್ದಾರೆ. ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇದ್ದರೂ ಸಾಮಾಜಿಕ ನ್ಯಾಯಾಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿಯನ್ನು ಕಳೆದ 30 ವರ್ಷಗಳಿಂದ ಮಾದಿಗ ದಂಡೋರ ರಾಜ್ಯದಲ್ಲಿ ಅನೇಕ ಕ್ರಾಂತಿಕಾರಿ ಹೋರಾಟಗಳನ್ನು ನಡೆಸಿದೆ. ಅದರಂತೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಹೋರಾಟಕ್ಕೆ ಜಿಲ್ಲೆಯ ನೂರಾರು ಜನತೆ ಆಗಮಿಸಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಘಟನೆಯ ಮುಖಂಡರುಗಳಾದ ದಾನಪ್ಪ ಗುತ್ತೇವಾರು,ವೀರ ಸ್ವಾಮಿ, ಗಂಗಾಧರ ಸಂಗನಕಲ್ಲು, ಮಲ್ಲಿಕಾರ್ಜುನ ಜಾಲಿಹಾಳ,ದುರ್ಗೇಶ, ಗಂಗಾಧರ ಇಂದ್ರಾನಗರ್, ಸುಂಕಪ್ಪ, ವಿಜಯಕುಮಾರ್, ಎರಿಸ್ವಾಮಿ, ಆರ್ ಶಿವಶಂಕರ್ ಹೊಸಯರ ಗುಡಿ ಮೊದಲಾದವರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 