ಸುಣಗಾರ ನೇಮಕ ಮಾಡಿ ಡಿಸಿ ಆದೇಶ
ಹಾವೇರಿ29: ಬೆಳೆ ಸಾಲ ಮನ್ನಾ ಯೋಜನೆಯ ಜಿಲ್ಲಾ ನಿರ್ವಹಣೆಗಾಗಿ ಜಿಲ್ಲಾಡಳಿತದಿಂದ ವಿಶೇಷ ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ.
ಜಿಲ್ಲಾ ಉಸ್ತುವಾರಿ ಕೋಶದ ಕಂಟ್ರೋಲ್ ರೂಮ್ ಕಾರ್ಯದ ಉಸ್ತುವಾರಿಗೆ ಸಹಕಾರಿ ಸಂಘಗಳ ಇಲಾಖೆಯ ಅಭಿವೃದ್ಧಿ ಅಧಿಕಾರಿ ಎಸ್.ಜಿ.ಸುಣಗಾರ ಇವರನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಡಳಿತದ ನೆಲಮಹಡಿಯಲ್ಲಿ ಕಚೇರಿ ತೆರೆಯಲಾಗಿದ್ದು, ಪ್ರತಿ ದಿನ ಜಿಲ್ಲಾ ಭೂಮಿ, ಎಸ್.ಜಿ.ಎಸ್.ಕೆ. ಸಮಾಲೋಚಕರ ಸಹಯೋಗದೊಂದಿಗೆ ಬೆಳೆ ಸಾಲ ಮನ್ನಾ ಕುರಿತಂತೆ ರಾಷ್ಟ್ರೀಕೃತ ಬ್ಯಾಂಕ್ಗಳಿಂದ ಪ್ರಗತಿ ವಿವರ ಪಡೆಯುವುದು, ಈ ಕುರಿತಂತೆ ತಹಶೀಲ್ದಾರ ಕಾಯರ್ಾಲಯಗಳಲ್ಲಿ ಆನ್ಲೈನ್ ವ್ಯವಸ್ಥೆ, ತಂತ್ರಾಂಶಗಳ ನ್ಯೂನ್ಯತೆಗಳನ್ನು ಸರಿಪಡಿಸಿ ಸಕಾಲದಲ್ಲಿ ಮಾಹಿತಿಗಳನ್ನು ಪಡೆದು ಸಲ್ಲಿಸುವ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.
ಸದರಿ ನ್ಯೂನ್ಯತೆಗಳು ಕಂಡುಬಂದರೆ ಕಂಟ್ರೋಲ್ ರೂಮ್ನ ದೂರವಾಣಿ 08375-249120 ಹಾಗೂ ಮೊ:95382 77068 ಸಂಪಕರ್ಿಸಲು ತಿಳಿಸಿದೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 