ಅಥಣಿ ರಾಯರ ಮಠದ ಅಭಿವೃದ್ಧಿಗೆ ಬದ್ಧ: ಶಾಸಕ ಲಕ್ಷ್ಮಣ ಸವದಿ
Committed to the development of Athani Raya Mutt: MLA Lakshman Savadi
ಅಥಣಿ ರಾಯರ ಮಠದ ಅಭಿವೃದ್ಧಿಗೆ ಬದ್ಧ: ಶಾಸಕ ಲಕ್ಷ್ಮಣ ಸವದಿ
ಅಥಣಿ 10: ಗುರು ರಾಘವೇಂದ್ರ ಸ್ವಾಮೀಜಿ ಕಲಿಯುಗದ ಕಲ್ಪವೃಕ್ಷರಾಗಿ ತಮ್ಮ ಭಕ್ತರನ್ನು ಉದ್ಧರಿಸುತ್ತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಅಭಿನವ ಮಂತ್ರಾಲಯ ಎಂದೇ ಪ್ರಖ್ಯಾತಿ ಪಡೆದ ಅಥಣಿ ರಾಘವೇಂದ್ರ ಸ್ವಾಮೀಜಿ ಮಠದಲ್ಲಿ ಗೌರವ ಸತ್ಕಾರ ಸ್ವೀಕರಿಸಿ ಮಾತನಾಡುತ್ತಿದ್ದರು.
ರಾಜಕೀಯ ಜೀವನ ಪ್ರವೇಶಿಸುವ ಮೊದಲಿನಿಂದಲೂ ನಾನು ರಾಘವೇಂದ್ರ ಸ್ವಾಮಿಗಳ ಭಕ್ತನಾದ ನಾನು ವರ್ಷಕ್ಕೆ ಎರಡು ಬಾರಿಯಾದರೂ ಮಂತ್ರಾಲಯಕ್ಕೆ ಹೋಗಿ ರಾಯರ ವೃಂದಾವನದ ದರ್ಶನ ಪಡೆಯುತ್ತೇನೆ ಮತ್ತು ನನ್ನ ರಾಜಕೀಯ ಜೀವನ ಯಶಸ್ವಿಯಾಗುವಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅನುಗೃಹ ಕೂಡ ಇದೆ ಎಂದ ಅವರು ಅಥಣಿ ಶ್ರೀ ರಾಘವೇಂದ್ರ ಮಠದ ಅಭಿವೃದ್ಧಿಗಾಗಿ ನಾನು ಸದಾ ಬದ್ಧನಾಗಿರುವೆ ಎಂದರು.
ರಾಘವೇಂದ್ರ ಸ್ವಾಮಿ ಮಠದ ವಿಶ್ವಸ್ಥ ಮಂಡಳಿಯ ಅನೀಲರಾವ ದೇಶಪಾಂಡೆ (ಸರಾಫ), ಅನೀಲ ದೇಶಪಾಂಡೆ ( ಹಿಡಕಲ್), ಎಲ್.ವ್ಹಿ.ಕುಲಕರ್ಣಿ, ರಾಜು ಪಾಟೀಲ, ಶ್ರೀನಿವಾಸಾಚಾರ್ಯ ಜೋಶಿ ಶಾಸಕ ಲಕ್ಷ್ಮಣ ಸವದಿ ಇವರನ್ನು ಗೌರವಿಸಿದರು. ಧುರೀಣರಾದ ಶ್ರೀರಾಮ ಕಟ್ಟಿ, ಅಜಿತ ಇನಾಮದಾರ, ಸುಧೀಂದ್ರ ಬಾದರಾಯಣಿ, ವಾಸುದೇವ ಕುಲಕರ್ಣಿ, ಸೌರಭ ಮಾಶ್ಯಾಳ, ವೆಂಕಟೇಶ ದೇಶಪಾಂಡೆ, ಅನೀಲ ಕುಲಕರ್ಣಿ, ದೀಪಕ್ ಟಿಕಾರೆ, ವೆಂಕಟೇಶ ಕುಲಕರ್ಣಿ, ಅಥರ್ವ ದೇಶಪಾಂಡೆ, ಶ್ರೀಹರಿ ಕುಲಕರ್ಣಿ, ಅಜಯ ದೇಶಪಾಂಡೆ, ಭಾರ್ಗವ ಕೊಕಟನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಶ್ರೀರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ನಿಮಿತ್ಯ ಸಾವಿರಾರು ಭಕ್ತರು ಅನ್ನ, ಪ್ರಸಾದ ಸ್ವೀಕರಿಸಿದರು. ಸಂಜೆ ಬೆಂಗಳೂರಿನ ಅನುರಾಧಾ .ಎ. ಇವರಿಂದ ಸಂಗೀತ ಕಾರ್ಯಕ್ರಮ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 