ಸಮಿತಿ ಶಾಲಾ-ಕಾಲೇಜು ಮಾರ್ಗವಾಗಿ ವಂಟಮುರಿಗೆ ಹೊಸ ಬಸ್ ಸಂಚಾರ ಆರಂಭ
Committee launches new bus service to Vantamuri via the school-college route
ಲೋಕದರ್ಶನ ವರದಿ
ಕಾಗವಾಡ 1: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಬೆಳಗಾವಿ ಸಿಬಿಟಿಯಿಂದ ಸಮಿತಿ ಶಾಲಾ-ಕಾಲೇಜು ಮಾರ್ಗವಾಗಿ ವಂಟಮುರಿಗೆ ಹೊಸ ಬಸ್ ಸಂಚಾರಕ್ಕೆ ಚಾಲನೆ ನೀಡಲಾಯಿತು. ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸಿಫ್ (ಆರಿಫ್) ಸೇಠ್ ಹಾಗೂ ವಾಕರಸಾ ಸಂಸ್ಥೆಯ ಉಪಾಧ್ಯಕ್ಷ ಸುನೀಲ ಹಣಮಣ್ಣವರ ಬಸ್ಗೆ ಪೂಜೆ ಸಲ್ಲಿಸಿ, ನೂತನ ಮಾರ್ಗದ ಸಂಚಾರಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಸಮಿತಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ವಿನೋದ ಪಾಟೀಲ ಮಾತನಾಡಿ, ಹೊಸ ಬಸ್ ಸೇವೆಗೆ ಅನುಮೋದನೆ ನೀಡಿದ ಸಾರಿಗೆ ಸಂಸ್ಥೆ ಹಾಗೂ ಜನಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಮಾರ್ಗದಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಈ ಪ್ರದೇಶಕ್ಕೆ ನೂತನ ಬಸ್ ನಿಲ್ದಾಣ ನಿರ್ಮಿಸುವಂತೆ ಶಾಸಕರಿಗೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಮಹಾವೀರ ಹರದಿ, ಎ.ಬಿ. ಪಾಟೀಲ, ಶರದ್ ಬಾಲಿಕಾಯಿ, ಪ್ರಾಂಶುಪಾಲ ರವಿ ದಂಡಗಿ, ಉಪ ಪ್ರಾಂಶುಪಾಲ ಡಾ. ಭರತ ಅಲಸಂದಿ, ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲ ವಿ.ಬಿ. ತುರಮರಿ, ಸ್ನಾತಕೋತ್ತರ ವಿಭಾಗದ ಸಂಯೋಜಕಿ ಡಾ. ರೇಖಾ ಕಲಬುರ್ಗಿ, ಬಿಸಿಎ ವಿಭಾಗದ ಅನೀಲ ಹಾಲಬಾವಿ, ಬಿಬಿಎ ವಿಭಾಗದ ಪ್ರಾಂಶುಪಾಲ ಭಾಗ್ಯಶ್ರೀ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 