ಸಮುದಾಯ ಭವನ ನಿರ್ಮಾಣ ಕಾಮಗಾರಿ ಚಾಲನೆ
Community building construction work underway
ರಾಯಬಾಗ 13: ಮತಕ್ಷೇತ್ರದ ಎಲ್ಲ ಸಮುದಾಯದವರಿಗೆ ಸಮುದಾಯ ಭವನ ನಿರ್ಮಿಸಿ ಕೊಡಲಾಗುತ್ತಿದ್ದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಮಂಗಳವಾರ ತಾಲೂಕಿನ ಯಡ್ರಾಂವ ಗ್ರಾಮದ ಬೀರೇಶ್ವರ ದೇವಸ್ಥಾನ ಹತ್ತಿರ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಜಿ.ಪಂ.ಇಲಾಖೆಯಿಂದ ಮಂಜೂರಾದ 5 ಲಕ್ಷ ರೂ. ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿ ಹಾಗೂ 5 ಲಕ್ಷ ರೂ. ವೆಚ್ಚದಲ್ಲಿ ನಸಲಾಪುರ ಗ್ರಾಮದ ಜೈನ ಸಮುದಾಯದ ಸ್ಮಶಾನ ಅಭಿವೃದ್ಧಿ ಪಡಿಸುವ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಹಂತ ಹಂತವಾಗಿ ಎಲ್ಲ ಸಮಾಜದ ಸ್ಮಶಾನಗಳನ್ನು ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಎಂದರು.
ಜಿ.ಪಂ.ಎಇ ಎಸ್.ಎಸ್.ಹೊಸಮನಿ, ಜೆ.ಇ. ರಾಕೇಶ ಕಟ್ಟಿಮನಿ, ಯಡ್ರಾಂವ ಗ್ರಾ.ಪಂ.ಅಧ್ಯಕ್ಷೆ ಅಶ್ವಿನಿ ಧನಗರ, ಉಪಾಧ್ಯಕ್ಷೆ ಅಕ್ಕಾತಾಯಿ ಐಹೊಳೆ, ಮುಖಂಡರಾದ ಸದಾಶಿವ ಘೋರೆ್ಡ, ಭರತೇಶ ಬನವಣೆ, ಕಲ್ಲಪ್ಪ ನಿಂಗನೂರೆ, ಚೌಗೌಡ ಪಾಟೀಲ, ಜಯಪಾಲ ಬನವಣೆ, ಅರುಣ ನಾಯಿಕ, ಅನೀಲ ಪಾಟೀಲ, ಬಾಳಾಸಾಹೇಬ ಪಾಟೀಲ, ಮಹಾದೇವ ಕಾಂಬಳೆ, ನಿಂಗಪ್ಪ ಕುಂಬಾರ, ವರ್ಧಮಾನ ಬನವಣೆ, ಮಂಜುಳಾ ನುಚ್ಚಂಬಲಿ, ಮಹೇಶ ಮಾಂಗ, ಹಾಲಪ್ಪ ಧನಗರ, ಶ್ರೀಕಾಂತ ಪಡಲಾಳೆ, ಸುರೇಶ ಐಹೊಳೆ, ಮಹೇಶ ಬೆಳಸಿ, ಶಿವಾಜಿ ಕೆಂಚೆ, ದಶರಥ ಐಹೊಳೆ ಸೇರಿ ಅನೇಕರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 