ಕೊರೋನಾವೈರಸ್ ಮೂಲಕ ಸಮುದಾಯದ ಹೀಯಾಳಿಕೆ: ಪತ್ರಿಕೆ ವಿರುದ್ಧ ಹೋರಾಟಕ್ಕೆ ಮುಸ್ಲಿಂ ಜಮಾಅತ್ ನಿರ್ಧಾರ
ಬೆಂಗಳೂರು,
ಮಾ.28 (ಯುಎನ್ಐ) ಕೊರೋನಾವೈರಸ್ ಆತಂಕದ ನಡುವೆ ಒಂದು ಸಮುದಾಯವನ್ನು ಹೀಯಾಳಿಸಿ,
ಕೊರೋನಾವನ್ನು ಕೋಮುವಾದೀಕರಣ ಮಾಡಲು ಹೊರಟಿರುವ ದಿನಪತ್ರಿಕೆಯೊಂದರ ವಿರುದ್ಧ
ಮುಖ್ಯಮಂತ್ರಿ, ಪತ್ರಿಕಾ ಸಂಪಾದಕರು ಮತ್ತು ಪ್ರೆಸ್ ಕೌನ್ಸಿಲ್ ಗೆ ದೂರು ನೀಡಲಾಗುವುದು
ಮತ್ತು ಕಾನೂನು ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ತಿಳಿಸಿದೆ. ಈ
ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಜಮಾಅತ್ನ ಮುಖಂಡ ಶಾಫಿ ಸಹದಿ, ಕೊರೊನಾ
ವಿಶ್ವಾದ್ಯಂತ ವ್ಯಾಪಿಸಿದೆ. ಮನುಷ್ಯನ ಧರ್ಮ ನೋಡಿ ಈ ವ್ಯಾಧಿ ಹರಡುತ್ತಿಲ್ಲ. ಧರ್ಮ,
ವರ್ಗ, ವರ್ಣದವರಲ್ಲೂ ಈ ರೋಗ ಕಂಡುಬಂದಿದೆ. ವಿಚಿತ್ರವೆಂದರೆ ಕನ್ನಡ ಪತ್ರಿಕೋದ್ಯಮದ
ಕೆಲವರ ಕೋಮು ಮನಸ್ಥಿತಿ ಈ ಕೊರೋನಾವನ್ನು ಕೋಮುವಾದೀಕರಣ ಮಾಡಲು ಹೊರಟಿದೆ.
'ಸತ್ತವರೆಲ್ಲಾ ಒಂದೇ ಸಮುದಾಯದವರು' ಎಂಬ ಮುಖಪುಟ ವರದಿಯನ್ನು ಪತ್ರಿಕೆಯೊಂದು
ಪ್ರಕಟಿಸಿದೆ. ಈ ವೈರಸ್ ಕರ್ನಾಟಕದಲ್ಲಿ ಯಾವ ಧರ್ಮದವರಲ್ಲಿ ಹೆಚ್ಚು ಬಂದಿದೆ, ಯಾವ
ಧರ್ಮದವರು ಹೆಚ್ಚು ಸತ್ತಿದ್ದಾರೆ, ಯಾವ ಧರ್ಮದವರಿಗೆ ಪೊಲೀಸರು ಹೆಚ್ಚು
ಪೆಟ್ಟುಕೊಟ್ಟಿದ್ದಾರೆ ಎನ್ನುವ ಸುದ್ದಿಯೊಂದಿಗೆ ವಿಕೃತ ಮನೋಭಾವ ಪ್ರದರ್ಶಿಸಿದೆ. ಕೊರೋನ
ಹರಡಿ ಎಂದು ಕರೆ ನೀಡಿದ್ದ ಕಿಡಿಗೇಡಿಯೊಬ್ಬನ ನೀಚ ಕೃತ್ಯವನ್ನೂ ಈ ವರದಿಯೊಂದಿಗೆ
ಜೋಡಿಸಿ ಇತರ ಸಮುದಾಯಗಳ ಮಧ್ಯೆ ಮುಸ್ಲಿಂ ಸಮುದಾಯವನ್ನು ತಪ್ಪಿತಸ್ಥ ವಿಭಾಗವನ್ನಾಗಿ
ಚಿತ್ರೀಕರಿಸುವ ಪ್ರಯತ್ನವೂ ನಡೆದಿದೆ. ಕೊರೋನಾ ವಿರುದ್ಧ ಹೋರಾಟದಲ್ಲಿ ಇಡೀ ಮುಸ್ಲಿಂ
ಸಮುದಾಯ ಭಾಗಿಯಾಗಿದ್ದು, ಚರಿತ್ರೆಯಲ್ಲೇ ಮೊದಲ ಬಾರಿ ಮುಸ್ಲಿಮರು ಮಸೀದಿಗಳಲ್ಲಿ ನಮಾಝ್
ನಿಲ್ಲಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಮುಸ್ಲಿಮರು ನಮಾಝ್ ಮಾಡಲು ಮಸೀದಿಗೆ
ಹೋಗಬೇಕಾಗಿಲ್ಲ ಎಂಬ ಫತ್ವಾವನ್ನು ಅತ್ಯಂತ ಯಶಸ್ವಿಯಾಗಿ ಸಮುದಾಯದ ಮಧ್ಯೆ ಬಿತ್ತರಿಸಲು
ಮುಸ್ಲಿಂ ಪಂಡಿತರಿಗೆ ಸಾಧ್ಯವಾಗಿದೆ. ರಾಜ್ಯದ ಮುಖ್ಯಮಂತ್ರಿಗಳು ಕೂಡ ಮುಸ್ಲಿಮರ ಈ
ಹೋರಾಟವನ್ನು ಶ್ಲಾಘಿಸಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಪತ್ರಿಕೆಗಳಿಂದ ಸಮಾಜದ
ಸ್ವಾಸ್ಥ ಹಾಳಾಗುತ್ತಿದೆ. ಆದ್ದರಿಂದ ಇದರ ವಿರುದ್ಧ ಕಾನೂನು ಸೇರಿದಂತೆ ಎಲ್ಲಾ ಹೋರಾಟ
ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 