ಉದ್ಯಮಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಅಂತಾರಾಜ್ಯ ವಂಚಕರ ವಿರುದ್ಧ ದೂರು
ಬೆಂಗಳೂರು, ಜೂ.13, ಉದ್ಯಮಿಗಳನ್ನೇ ಕೇಂದ್ರೀಕರಿಸಿ ಯಾಮಾರಿಸುತ್ತಿದ್ದ ಅಂತಾರಾಜ್ಯ ವಂಚಕರ ವಿರುದ್ಧ ಕಬ್ಬನ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಕೇರಳ ಮೂಲದ ಅಮ್ಜತ್ ಮತ್ತು ಖುಷಿ ಜಾನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಡಿದ್ದಾರೆ. ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡು ಅಮ್ಜತ್ ಉದ್ಯಮಿಗಳನ್ನು ವಂಚಿಸಿದ್ದ. ಅಮ್ಜತ್ ಮತ್ತು ಖುಷಿ ಜಾನ್ ಅವರು ತಮ್ಮ 48 ಲಕ್ಷ ರೂ.ಗೆ ಬೆನ್ಜ್ ಕಾರು ಪಡೆದುಕೊಂಡು ಎರಡು ತಿಂಗಳಾದರೂ ಹಣ ನೀಡಿಲ್ಲ. ಅಲ್ಲದೇ, ಕಾರು ವಾಪಸ್ಸು ನೀಡದೇ ಮೋಸ ಮಾಡಿದ್ದಾರೆ. ಈ ಬಗ್ಗೆ ವಿಚಾರಿಸಿದಾಗ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಉದ್ಯಮಿ ಶಾಜೀ ಜಾರ್ಜ್ ಥಾಮಸ್ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ನಂತರ ಬೆನ್ಜ್ ಕಾರನ್ನು ಹಿಂದಿರುಗಿಸಿದಾಗ ಕಾರು ದುಸ್ಥಿತಿಯಲ್ಲಿದ್ದು, ರಿಪೇರಿ ಮಾಡಲು 18 ಲಕ್ಷ ರೂ. ವೆಚ್ಚ ಮಾಡಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ.ಆರೋಪಿಗಳ ವಿರುದ್ಧ ಕೇರಳ ಸೇರಿ ರಾಜ್ಯದ ಹಲವೆಡೆ ವಂಚನೆ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 