ಭಾರತ್ ಬಂದ್ಗೆ ರಾಣೇಬೆನ್ನೂರಲ್ಲಿ ಸಂಪೂರ್ಣ ವಿಫಲ
ಲೋಕದರ್ಶನವರದಿ
ರಾಣಿಬೆನ್ನೂರ: ಕೇಂದ್ರ ಸಕರ್ಾರದ ಕಾಮರ್ಿಕರ ವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಭಾರತ್ ಬಂದ್ ರಾಣೇಬೆನ್ನೂರಿನಲ್ಲಿ ಸಂಪೂರ್ಣವಾಗಿ ವಿಫಲಗೊಂಡಿದೆ. ಕೆಲ ಸಂಘಟನೆಗಳು ನೆಪ ಮಾತ್ರಕ್ಕೆ ತಹಶೀಲ್ದಾರರಿಗೆ ಮನವಿ ಪತ್ರ ಅಪರ್ಿಸಿದ್ದನ್ನು ಹೊರತು ಪಡಿಸಿದರೆ ಬಂದ್ಗೆ ಬೆಂಬಲ ದೊರೆಯಲಿಲ್ಲ. ಸಾರಿಗೆ ಬಸ್ಗಳು ಸೇರಿದಂತೆ ಆಟೋ ಮತ್ತು ಲಾರಿ, ಖಾಸಗಿ ವಾಹನಗಳು ಮತ್ತಿತರ ವಾಹನಗಳು ಎಂದಿನಂತೆ ಸಂಚರಿಸಿದವು. ಶಾಲಾ-ಕಾಲೇಜುಗಳು ಎಂದಿನಂತೆ ತರಗತಿ ಆರಂಭಿಸಿದವು. ಚಲಚಿತ್ರ ಮಂದಿರಗಳು, ಕೆಲವು ಬ್ಯಾಂಕ್ಗಳು ಬಂದ್ನಿಂದ ದೂರ ಉಳಿದಿದ್ದು ಕಂಡು ಬಂದಿತು.
ಜನನಿಬೀಡ ಪ್ರದೇಶಗಳಾದ ಪಿಬಿ ರಸ್ತೆ ಎಂಜಿ ರಸ್ತೆ, ಬಿಎಸ್ ರೋಡ್, ಹಲಗೇರಿ ರಸ್ತೆ, ಮೇಡ್ಲೇರಿ ರಸ್ತೆ, ದೇವರಗುಡ್ಡ ರೋಡ್ ಸೇರಿದಂತೆ ಮತ್ತಿತರ ರಸ್ತೆಗಳಲ್ಲಿ ಎಂದಿನಂತೆ ಇಂದು ಸಹ ಹೆಚ್ಚಾಗಿ ಜನರು ಮತ್ತು ವಾಹನಗಳು ಸಂಚರಿಸಿದ್ದು ಕಂಡು ಬಂದಿತು. ಹೊಟೇಲ್ಗಳು, ಕಿರಾಣಿ ಅಂಗಡಿಗಳು, ಜನರಲ್ ಸ್ಟೋರ್, ಆಸ್ಪತ್ರೆ, ಔಷಧಿ ಅಂಗಡಿಗಳು, ಮದ್ಯದ ಅಂಗಡಿಗಳು ಎಂದಿನಂತೆ ತೆರೆದಿದ್ದವು. ಬಸ್ ನಿಲ್ದಾಣದಲ್ಲಿ ಜನ ಜಂಗುಳಿ ಅಧಿಕವಾಗಿತ್ತು. ಒಟ್ಟಾರೆ ಭಾರತ್ ಬಂದ್ಗೆ ರಾಣೇಬೆನ್ನೂರಿನಲ್ಲಿ ಯಾವುದೇ ಪರಿಣಾಮ ಬೀರದಿರುವುದು ಕಂಡು ಬಂದಿತು.
ಜಿಲ್ಲೆಯಾದ್ಯಂತ ಗಣತಿ ಕಾರ್ಯ ಸಂಪೂರ್ಣವಾಗಿ ಯಶಸ್ವಿಗೊಳಿಸಿ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 