ನಿಗದಿತ ಅವಧಿಯಲ್ಲಿ ಎಸ್ಐಆರ್ ಪೂರ್ಣಗೊಳಿಸಿ: ಪಾಲಿಕೆ ಆಯುಕ್ತ ಕಾರ್ತಿಕ್ ಎಂ.
Complete the SIR within the stipulated time: Municipal Commissioner Karthik M.
ಲೋಕದರ್ಶನ ವರದಿ
ಬೆಳಗಾವಿ ಜೂನ್ 01 : ಚುನಾವಣಾ ಆಯೋಗದ ಆದೇಶದಂತೆ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯಾರಂಭ ಮಾಡಲಾಗಿದ್ದು ನಿಗದಿತ ಅವಧಿಯಲ್ಲಿಯೇ ಕಾರ್ಯಪೂರ್ಣಗೊಳ್ಳಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಚುನಾವಣಾ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಪಾಲಿಕೆ ಕಚೇರಿಯಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಇಲ್ಲಿಯವರೆಗೆ ಆಗಿರುವ ಪ್ರಗತಿಯ ಕುರಿತು ಸಿಬ್ಬಂದಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಉತ್ತರ ದಕ್ಷಿಣ ಎರಡು ವಿಭಾಗಗಳಿದ್ದು, ದಕ್ಷಿಣಕ್ಕೆ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಯುಕ್ತರಾದ ಕಾರ್ತಿಕ್ ಎಮ್ ಅವರು, ಸಹಾಯಕ ಚುನಾವಣಾ ಅಧಿಕಾರಿಯಾಗಿ ಕಂದಾಯ ವಿಭಾಗದ ಉಪ ಆಯುಕ್ತ ಡಾ. ಸಿದ್ದು ಹುಲ್ಲೋಳಿ ಹಾಗೂ ಉತ್ತರ ಭಾಗದ ಚುನಾವಣಾ ಅಧಿಕಾರಿಯಾಗಿ ಪಾಲಿಕೆ ಆಡಳಿತ ವಿಭಾಗದ ಉಪ ಆಯುಕ್ತ ಉದಯಕುಮಾರ ತಳವಾರ, ಸಹ ಚುನಾವಣಾ ಅಧಿಕಾರಿಯಾಗಿ ಅಭಿಯಂತರರಾದ ಲಕ್ಷ್ಮೀ ನಿಪ್ಪಾಣಿಕರ್ ನೇಮಕಗೊಂಡಿದ್ದಾರೆ.
40 ಮೇಲ್ವಿಚಾರಕರ ಮಾರ್ಗದರ್ಶನದಲ್ಲಿ ಉತ್ತರ ದಕ್ಷಿಣ ಸೇರಿ ಒಟ್ಟು 514 ಮತಗಟ್ಟೆ ಅಧಿಕಾರಿಗಳು ಕಾರ್ಯನಿರ್ವಹಿಸುವರು. ಈಗಾಗಲೇ ಉತ್ತರದಲ್ಲಿ ಶೇ. 72.02, ದಕ್ಷಿಣದಲ್ಲಿ ಶೇ. 82.66 ರಷ್ಟು ಮ್ಯಾಪಿಂಗ್ ಕಾರ್ಯ ಮುಗಿದಿದ್ದು, ಶೇ.90 ರಷ್ಟು ಗುರಿ ತಲುಪಿದ್ದು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗುತ್ತಿದೆ ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಜೂ. 30ರಿಂದ ಆಯಾ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯ ಆರಂಭ ಮಾಡಲಿದ್ದಾರೆ ಎಂಬ ಮಾಹಿತಿ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 