ಗುಣಮಟ್ಟದ ಜೊತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಸತೀಶ್ ಜಾರಕಿಹೊಳಿ
Complete the work within the stipulated time with quality: Minister Satish Jarkiholi
ಯರಗಟ್ಟಿ 29: ಸಮೀಪದ ಗೋವನಕೊಪ್ಪ ಗ್ರಾಮದ ಹತ್ತಿರದ ಘಟಪ್ರಭಾ ಬಲದಂಡೆ ಕಾಲುವೆ 67ಕಿ.ಮಿ ಕಾಮಗಾರಿ ಮಾನ್ಯ ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ್ ಜಾರಕಿಹೊಳಿ ಕಾಮಗಾರಿ ವೀಕ್ಷಣೆ ಮಾಡಿ ಮಾತನಾಡಿ "ಹಿಡಕಲ್ ಜಲಾಶಯ ಒಳ ಹರಿವು ಹೆಚ್ಚಾಗುತ್ತಿದೆ. ಈ ಭಾಗದ ರೈತರಿಗೆ ಘಟಪ್ರಭಾ ಬಲದಂಡೆ ಕಾಲುವೆ ರೈತರ ಜೀವನಾಡಿಯಾಗಿದ್ದು. ಈ ಭಾಗದಲ್ಲಿ ಸರಿಯಾಗಿ ಮಳೆ ಆಗುತ್ತಿಲ್ಲ. ಅದಕ್ಕಾಗಿ ಗುಣಮಟ್ಟದ ಜೊತೆಗೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಸರ್ಕಾರ ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿ ಕಾರ್ಯ ಮಾಡಲಾಗುತ್ತಿದ್ದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸವದತ್ತಿ ಶಾಸಕರಾದ ವಿಶ್ವಾಸ ವೈದ್ಯ, ಗೋಕಾಕ ನೀರಾವರಿಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರು ಕಾಖಂಡಕಿ, ಸಹಾಯಕ ಅಭಿಯಂತರು ಶ್ರೀನಿವಾಸ್ ಪಾಟೀಲ, ಶಿವು ಪಾಟೀಲ, ಎಪಿಎಂಸಿ ಅಧ್ಯಕ್ಷರಾದ ನೀಲಕಂಠ ಶಿದಬಸನ್ನವರ, ಬೆಮೂಲ ನಿರ್ದೇಶಕ ಶಂಕರ ಇಟ್ನಾಳ, ಬಸು ಸತ್ತೂರಿ, ಪ್ರಕಾಶ್ ವಾಲಿ, ಬಂಗಾರೆಪ್ಪ ಹರಳಿ, ಮಲಿಕಸಾಬ್ ಬಾಗವಾನ್,ಪ್ರವೀಣ ರಾಮಪ್ಪನವರ, ಶಿವೂ ರಾಠೋಡ್, ಗುತ್ತಿಗೆದಾರರಾದ ಬಾಳೇಶ ಕೌಜಲಗಿ, ಚೆನ್ನಪ್ಪ ಗುದಗನ್ನವರ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 