ಕೊಲೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಕಂಪ್ಲಿ ಪೊಲೀಸರು
Complimentary police succeed in arresting murder suspect
ಕಂಪ್ಲಿ ; 20: ಕಂಪ್ಲಿ ಪಟ್ಟಣದ ಐತಿಹಾಸಿಕ ಸೋಮಪ್ಪ ಕೆರೆ ಅಂಗಳದಲ್ಲಿ ಇತ್ತೀಚೆಗೆ ವ್ಯಕ್ತಿಯೊಬ್ಬರ ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಕಂಪ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮೇ.15ರ ರಾತ್ರಿ ಸಮಯದಲ್ಲಿ ಆಂದ್ರ್ರದೇಶದ ನದಿಚಾಗಿ ಗ್ರಾಮದ ದೊಡ್ಡ ಬಸವನಗೌಡ ಇವರನ್ನು ಆರೋಪಿಗಳು ಬರ್ಬರವಾಗಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದರು. ಆದರೆ, ಕಂಪ್ಲಿ ಠಾಣೆಯಲ್ಲಿ ಸಂಬಂಧಿಕರಾದ ಚನ್ನಬಸಪ್ಪ ಇವರು ದೂರು ನೀಡಿದ ಹಿನ್ನಲೆ ನಂತರ ಎಸ್ಪಿ ಡಾ.ಶೋಭಾ ರಾಣಿ ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೆ.ಪಿ.ರವಿಕುಮಾರ ಅವರ ಮುಂದಾಳತ್ವದಲ್ಲಿ ತಂಡ ರಚಿಸಿ, ಕಂಪ್ಲಿ ನಗರದ ಆರೋಪಿ ರಾಜಶೇಖರ(19) ಮತ್ತು ಪ್ರಾಯ ಬಾಲಕನನ್ನು ಬಂಧಿಸಿದ್ದಾರೆ.
ಡಿವೈಎಸ್ಪಿ ಪ್ರಸಾದ್ ಗೋಖುಲೆ, ಪಿಐ ಕೆ.ಬಿ.ವಾಸುಕುಮಾರ, ಪಿಎಸ್ಐ ಅವಿನಾಶ ಕಾಂಬ್ಳೆ, ಎಎಸ್ಐ ಬಸವರಾಜ, ಸಿಬ್ಬಂದಿಗಳಾದ ಬಸವರಾಜ ಹಿರೇಮಠ, ರಮೇಶ, ಮಲ್ಲೇಶ ರಾಥೋಡ್, ಸತ್ಯನಾರಾಯಣ, ಸುರೇಶ, ಮುತ್ತುರಾಜ್, ಗಾದಿಲಿಂಗಪ್ಪ, ವಿಶ್ವನಾಥ, ಪ್ರಭಾಕರ, ತಿಮ್ಮಯ್ಯ ಇವರು ಆರೋಪಿಗಳನ್ನು ಪತ್ತೆ ಹಚ್ಚುವ ಮೂಲಕ ಯಶಸ್ವಿಯಾಗಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 