ಸಂಚಾರ ಸುಗಮಕ್ಕೆ ಸಮಗ್ರ ಕ್ರಮ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ಸೂಚನೆ

ಸಂಚಾರ ಸುಗಮಕ್ಕೆ ಸಮಗ್ರ ಕ್ರಮ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅಧಿಕಾರಿಗಳಿಗೆ ಸೂಚನೆ  Comprehensive measures for smooth traffic flow: Deputy Commissioner Nagendra Prasad K. instructs off

ಲೋಕದರ್ಶನ ವರದಿ 

ಬಳ್ಳಾರಿ, ಆ.3: ನಗರದ ಸಂಚಾರ ದಟ್ಟಣೆ ನಿಯಂತ್ರಣ, ರಸ್ತೆ ಸುರಕ್ಷತೆ, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಸುಧಾರಣೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಕೆ. ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು.  ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ನಗರದ ಪ್ರಮುಖ ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರದಿಂದ ಉಂಟಾಗುತ್ತಿರುವ ದಟ್ಟಣೆಯನ್ನು ಕಡಿಮೆ ಮಾಡಲು ಚೆಕ್ಪೋಸ್ಟ್ಗಳು ಹಾಗೂ ಬೈಪಾಸ್ ರಸ್ತೆಗಳ ಮೂಲಕ ವಾಹನಗಳನ್ನು ಮಾರ್ಗ ಬದಲಾವಣೆ ಮಾಡುವಂತೆ ಸೂಚಿಸಿದರು. ಹೊಸಪೇಟೆ ಬೈಪಾಸ್ ಸುತ್ತಮುತ್ತಲಿನ ಸರ್ವಿಸ್ ರಸ್ತೆಗಳ ಮೂಲಕ ಭಾರಿ ವಾಹನಗಳನ್ನು ತಿರುಗಿಸಿ ನಗರದೊಳಗಿನ ಟ್ರಾಫಿಕ್ ಒತ್ತಡ ತಗ್ಗಿಸುವ ಕಾರ್ಯಯೋಜನೆ ರೂಪಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.