ರಾಷ್ಟ್ರೀಯ ಲೋಕ ಅದಾಲತ್ ಽ ಒಂದಾದ 4 ಜೋಡಿಗಳು
Compromise: 28029 cases settled
ರಾಜೀ ಸಂಧಾನ : 28029 ಪ್ರಕರಣಗಳು ಇತ್ಯರ್ಥ
ಬಾಗಲಕೋಟೆ 15: ಜಿಲ್ಲಾ ನ್ಯಾಯಾಲಯ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ 5420 ಹಾಗೂ ವಾಜ್ಯ ಪೂರ್ವ ಪ್ರಕರಣಗಳಲ್ಲಿ 22609 ಪ್ರಕರಣ ಸೇರಿ ಒಟ್ಟು 28029 ಪ್ರಕರಣಗಳನ್ನು ರಾಜಿ ಸಂದಾನ ಮೂಲಕ ಇತ್ಯರ್ಥಪಡಿಸಲಾಯಿತು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್.ವಿ.ವಿಜಯ ಅವರ ನೇತೃತ್ವದಲ್ಲಿ ನಡೆದ ಲೋಕ ಅದಾಲತ್ನಲ್ಲಿ ಬಾಕಿ ಇರುವ 7989 ಪೈಕಿ 5420 ಹಾಗೂ ವಾಜ್ಯ ಪೂರ್ವ ಪ್ರಕರಣಗಳಲ್ಲಿ 29533 ಪೈಕಿ 22609 ಪ್ರಕರಣ ಸೇರಿ ಒಟ್ಟು 28029 ಪ್ರಕರಣಗಳನ್ನು ರಾಜಿ ಸಂದಾನ ಮೂಲಕ ಇತ್ಯರ್ಥಪಡಿಸಲಾಯಿತು. ಅದಾಲತ್ನಲ್ಲಿ ಒಟ್ಟು 51.03 ಕೋಟಿ ರೂ.ಗಳ ಪ್ರಕರಣದ ಮೊತ್ತವಾಗಿತ್ತು. ಅಲ್ಲದೇ ವಿಚ್ಚೇದನ ಕೋರಿ ಬಾಗಲಕೋಟೆ ಹಾಗೂ ಬೀಳಗಿ ನ್ಯಾಯಾಲಯದಲ್ಲಿ ತಲಾ ಒಂದು ಹಾಗೂ ಬನಹಟ್ಟಿ ನ್ಯಾಯಾಲಯದಲ್ಲಿ 3 ಸೇರಿ ಒಟ್ಟು 5 ಜೋಡಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಕುಟುಂಬ ನ್ಯಾಯಾಲಯದಲ್ಲಿ ರಾಜೀ ಮೂಲಕ ಒಂದು ಮಾಡಲಾಯಿತು.
ಜಿಲ್ಲಾ ನ್ಯಾಯಾಲಯದಲ್ಲಿ ಬಾಕಿ ಇರುವ 2187 ಪ್ರಕರಣಗಳ ಪೈಕಿ 1608, ಬೀಳಗಿ ನ್ಯಾಯಾಲಯದಲ್ಲಿ 140 ಪೈಕಿ 87, ಮುಧೋಳ ನ್ಯಾಯಾಲಯದಲ್ಲಿ 648 ಪೈಕಿ 517, ಬನಹಟ್ಟಿ ನ್ಯಾಯಾಲಯದಲ್ಲಿ 1146 ಪೈಕಿ 668, ಹುನಗುಂದ ನ್ಯಾಯಾಲಯದಲ್ಲಿ 404 ಪೈಕಿ 291, ಇಲಕಲ್ಲ ನ್ಯಾಯಾಲಯದಲ್ಲಿ 435 ಪೈಕಿ 352, ಬಾದಾಮಿ ನ್ಯಾಯಾಲಯದಲ್ಲಿ 739 ಪೈಕಿ 557 ಹಾಗೂ ಜಮಖಂಡಿ ನ್ಯಾಯಾಲಯದಲ್ಲಿ 2290 ಪೈಕಿ 1400 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.
ಬ್ಯಾಂಕಿಗೆ ಸಂಬಂಧಿಸಿದ 6133 ಪೈಕಿ 309 ಪ್ರಕರಣಗಳಿಗೆ ಒಟ್ಟು 4.40 ಕೋಟಿ ರೂ.ಗಳಿಗೆ ಇತ್ಯರ್ಥಗೊಂಡರೆ, ವಿದ್ಯುತ ಬಿಲ್ಗೆ ಸಂಬಂಧಿಸಿದ 88 ಪೈಕಿ 88 ಇತ್ಯರ್ಥಗೊಂಡು 2.77 ಲಕ್ಷ ರೂ, ನೀರಿನ ಕರಕ್ಕೆ ಸಂಬಂಧಿಸಿದ 983 ಪೈಕಿ 51ಕ್ಕೆ 3.25 ಲಕ್ಷ ರೂ, ಕಂದಾಯ ಇಲಾಖೆಗೆ ಸಂಬಂಧಿಸಿದ 519 ಪೈಕಿ 364 ಪ್ರಕರಣ, ಸಂಚಾರಿ ಉಲ್ಲಂಘನೆಗೆ ಸಂಬಂಧಿಸಿದ 10170 ಪೈಕಿ 10170ಕ್ಕೆ 42.24 ಲಕ್ಷ ರೂ, ಆಸ್ತಿ ತೆರಿಗೆ ಸಂಬಂಧಿಸಿದಂತೆ 11640 ಪೈಕಿ 11627 ಪ್ರಕರಣಗಳನ್ನು 2.30 ಕೋಟಿ ರೂ.ಗಳಿಗೆ ಇತ್ಯರ್ಥಪಡಿಸಲಾಯಿತು.
ಲೋಕ ಅದಾಲತ್ ಶಿಬಿರದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ್, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶ ಜಿ.ಎ.ಮೂಲಿಮನಿ, ಜಿಲ್ಲಾ ಕುಟುಂಬ ನ್ಯಾಯಾಧೀಶ ಕೃಷ್ಣಮೂರ್ತಿ ಪಡಸಲಗಿ, ಪ್ರಧಾನ ಹಿರಿಯ ದಿವಾನಿ ನ್ಯಾಯಾಧಿಶೆ ಹೇಮಾ ಪಸ್ತಾಪೂರ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಮಹೇಶ ಪಾಟೀಲ, 2ನೇ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧಿಶ ರಾಜಶೇಖರ ತಿಳಗಂಜಿ, ಪ್ರಧಾನ ದಿವಾಣಿ ನ್ಯಾಯಾಧೀಶ ಮುರಗೇಂದ್ರ ತುಬಾಕೆ, ಹೆಚ್ಚುವರಿ ದಿವಾನಿ ನ್ಯಾಯಾಧೀಶ ಪಿ.ಎಚ್.ನಾರಾಯಣಕರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 