ಕಂಪ್ಯೂಟರ್ ನಿರ್ವಾಹಕರ ದಿನಾಚರಣೆ
Computer Administrator's Day
ತಾಳಿಕೋಟಿ 27: ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಡೇಟಾ ಎಂಟ್ರಿ ಆಪರೇಟರ್ಗಳ ಕ್ಷೇಮಾಭಿವೃದ್ಧಿ ಸಂಘದಿಂದ ಕಂಪ್ಯೂಟರ್ ಪಿತಾಮಹ ಚಾರ್ಲೆಸ್ ಬ್ಯಾಬೇಜ್ ಸ್ಮರಣಾರ್ಥ ಕಂಪ್ಯೂಟರ್ ಆಪರೇಟರ್ಗಳ ದಿನಾಚರಣೆಯನ್ನು ಶುಕ್ರವಾರ ಆಚರಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅನಸೂಯಾ ಚಲವಾದಿ ಅವರು ಮಾತನಾಡಿ ಸಾರ್ವಜನಿಕರಿಗೆ ನಿಗದಿತ ಅವಧಿಯಲ್ಲಿ ಸೇವೆ ಸಲ್ಲಿಸಲು ಕಂಪ್ಯೂಟರ್ ಡೇಟಾ ಎಂಟ್ರಿ ಸಹಾಯಕರ ಸೇವೆ ಅಪಾರವಾಗಿದೆ.
ತಾಲೂಕಿನ ಎಲ್ಲಾ ಗಣಕಯಂತ್ರ ನಿರ್ವಾಹಕರು ಪ್ರಮಾಣಿಕವಾಗಿ ಕೆಲಸ ಮಾಡಿ ಮತ್ತು ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಬೇಕಾದರೆ ಹೆಚ್ಚಿನ ಜ್ಞಾನ ಮತ್ತು ಸಾಮರ್ಥ್ಯ ಹೊಂದಿರಬೇಕು. ಆಗಾಗ ಆಗುವ ಬದಲಾವಣೆಗೆ ತಕ್ಕಂತೆ ಹೆಚ್ಚಿನ ಕೌಶಲ್ಯದ ಜ್ಞಾನ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಪಿಡಿಓ ಪ್ರಕಾಶ ಅಂಜುಟಗಿ, ಆಯ್.ಡಿ.ಬಡಿಗೇರ, ಐಇಸಿ ಸಂಯೋಜಕ ಮಲಕಪ್ಪ, ಮಹಾಂತಗೌಡ ದೊರೆಗೋಳ, ಜಗದೀಶ್ ಲಮಾಣಿ, ಮಡಿವಾಳಪ್ಪ ತಳವಾರ, ಡಾಟಾ ಎಂಟ್ರಿ ಆಪರೇಟರ್ ಗಳಾದ ಗುರುನಾಥ ಬಿರಾದಾರ, ಆನಂದ ಮದರ್ಕಲ್, ಅಶೋಕ ನಾಟಿಕರ, ವೀರೇಶ ಹೊಸಮನಿ, ಡಿ.ಎಸ್.ಹಿರೇಮಠ, ಬಸವರಾಜ ಮಸರಕಲ್, ಮಲ್ಲು ಇಂಗಳೇಶ್ವರ, ಸಂತೋಷ ನಾಯ್ಕೋಡಿ, ಸಿದ್ದರಾಜ ಬಡಿಗೇರ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 