ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ.

ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ. Computer lab inaugurated at Government Arts and Science College

ಕಾರವಾರ 20: ಕಾರವಾರದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ, ಕರ್ನಾಟಕ ಬ್ಯಾಂಕಿನ ಸಿಎಸ್‌ಆರ್ ಉಪಕ್ರಮದಡಿಯಲ್ಲಿ ಉದಾರವಾಗಿ ದೇಣಿಗೆ ನೀಡಿ ಹೊಸದಾಗಿ ಸ್ಥಾಪಿಸಲಾದ ಕಂಪ್ಯೂಟರ್ ಲ್ಯಾಬ್‌ನ್ನು ಕರ್ನಾಟಕ ಬ್ಯಾಂಕಿನ ಸಹಾಯಕ ಪ್ರಧಾನ ವ್ಯವಸ್ಥಾಪಕ ವಾದಿರಾಜ್ ಭಟ್ ಶುಕ್ರವಾರ ಉದ್ಘಾಟಿಸಿದರು. 

ನಂತರ ಮಾತನಾಡಿದ ಅವರು ,  ಬಲವಾದ ಸಮುದಾಯಗಳನ್ನು ನಿರ್ಮಿಸುವಲ್ಲಿ ಮತ್ತು ಶಿಕ್ಷಣವನ್ನು ಬೆಂಬಲಿಸುವಲ್ಲಿ ಸಿಎಸ್‌ಆರ್ ಚಟುವಟಿಕೆಗಳ ಮಹತ್ವದ ಬಗ್ಗೆ ಹಾಗೂ 1924 ರಲ್ಲಿ ಸ್ಥಾಪನೆಯಾದ ಕರ್ನಾಟಕ ಬ್ಯಾಂಕಿನ ಬಗ್ಗೆ ವಿವರಿಸಿ, ಇದು 100 ವರ್ಷಗಳಿಗೂ ಹೆಚ್ಚು ಕಾಲ ಸಿಎಸ್‌ಆರ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಸಂಪ್ರದಾಯವನ್ನು ಹೊಂದಿದೆ. ಬ್ಯಾಂಕ್ ಆರ್ಥಿಕವಾಗಿ ಬಲಿಷ್ಠವಾಗಿದೆ. ಈ ಎಲ್ಲಾ ವರ್ಷಗಳಲ್ಲಿ ಉತ್ತಮ ಲಾಭ ಗಳಿಸುವ ಹೆಗ್ಗಳಿಕೆಯನ್ನು ಹೊಂದಿದೆ. ಇದು 19.75ಅ ನಷ್ಟು ಬಂಡವಾಳದ ಸಮರ​‍್ಕ ಅನುಪಾತ(ಅಂಖ)ದೊಂದಿಗೆ ಸ್ಥಿರವಾಗಿದೆ ಮತ್ತು ರೂ.180000 ಕೋಟಿಗಳಿಗಿಂತ ಹೆಚ್ಚಿನ ಬಿಟಿಒ ಹೊಂದಿದೆ. ಕಾಲೇಜಿಗೆ ಕಂಪ್ಯೂಟರ್‌ಗಳನ್ನು ಒದಗಿಸುವ ಮೂಲಕ ಸಿಎಸ್‌ಆರ್ ಚಟುವಟಿಕೆಯ ಭಾಗವಾಗಲು ಸಂತಸ ವ್ಯಕ್ತಪಡಿಸಿದರು. 

ಬಿಬಿಎ ವಿಭಾಗದ ಮುಖ್ಯಸ್ಥ ಮಹಮ್ಮದ್ ಫಯಾಝ್ ಮಾತನಾಡಿ, ಶಿಕ್ಷಣ ಸಂಸ್ಥೆಗಳನ್ನು ಉನ್ನತೀಕರಿಸುವಲ್ಲಿ ಸಿಎಸ್‌ಆರ್ ಕಾರ್ಯಕ್ರಮಗಳ ಮಹತ್ವವನ್ನು ಮತ್ತು ವಿಶೇಷವಾಗಿ ಗ್ರಾಮೀಣ ಮತ್ತು ಹಿಂದುಳಿದ ಹಿನ್ನೆಲೆಯ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಲ್ಯಾಬ್‌ನ ದೀರ್ಘಕಾಲೀನ ಪ್ರಯೋಜನಗಳನ್ನು ಹೇಳಿದರು.  

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲೆ ಗೀತಾ ಎಸ್‌. ವಾಲಿಕರ್ ಮಾತನಾಡಿ, ಶಿಕ್ಷಣದ ಉದ್ದೇಶಕ್ಕಾಗಿ ಕರ್ನಾಟಕ ಬ್ಯಾಂಕ್ ನೀಡಿದ ಉದಾರ ಕೊಡುಗೆಗಾಗಿ ಕೃತಜ್ಞತೆಯನ್ನು ವ್ಯಕ್ತಪಡಿಸಿದರು ಮತ್ತು ಡಿಜಿಟಲ್ ಕಲಿಕೆಯನ್ನು ಹೆಚ್ಚಿಸಲು ಪ್ರಯೋಗಾಲಯವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.  

ಕರ್ನಾಟಕ ಬ್ಯಾಂಕಿನ ಕ್ಲಸ್ಟರ್ ಮುಖ್ಯಸ್ಥ ರಂಜಿತ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವೈಯಕ್ತಿಕ ಹಣಕಾಸು ಜಾಗೃತಿಯ ಮಹತ್ವವನ್ನು ಮತ್ತು ಅವರ ಭವಿಷ್ಯದಲ್ಲಿ ಭದ್ರತೆಗೆ ಹೇಗೆ ಕೊಡುಗೆ ನೀಡುತ್ತದೆ ಎಂಬುದನ್ನು ಮಾಹಿತಿ ನೀಡಿದರು.  

ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಿಡಿಸಿ ಖಜಾಂಚಿ ಪ್ರಕಾಶ್ ರಾಣೆ ಮಾತನಾಡಿ, ಪ್ರಯೋಗಾಲಯ ಸೌಲಭ್ಯಗಳ ಸರಿಯಾದ ನಿರ್ವಹಣೆಯ ಅಗತ್ಯವನ್ನು ಮತ್ತು ಒದಗಿಸಲಾದ ಸಂಪನ್ಮೂಲಗಳನ್ನು ಉತ್ತಮವಾಗಿ ಬಳಸಿಕೊಳ್ಳಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.  

ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಿಡಿಸಿ ಸದಸ್ಯ ಇಬ್ರಾಹಿಂ ಕಲ್ಲೂರ್ ಸರ್ಕಾರಿ ಕಾಲೇಜುಗಳಲ್ಲಿ ನೀಡಲಾಗುವ ಶಿಕ್ಷಣವು ವಿದ್ಯಾರ್ಥಿಗಳ ಜೀವನದಲ್ಲಿ ಹೆಚ್ಚಿನ ಎತ್ತರವನ್ನು ಸಾಧಿಸಲು ಹೇಗೆ ಸಬಲೀಕರಣಗೊಳಿಸುತ್ತದೆ ಎಂದರು.  

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.  

 ಕುಮಟಾದ  ಕರ್ನಾಟಕ ಬ್ಯಾಂಕ್ ಕಾರವಾರದ ಶಾಖಾ ವ್ಯವಸ್ಥಾಪಕ ಗೌತಮ್ ಶೆಟ್ಟಿ, ಕಂಪ್ಯೂಟರ್ ವಿಜ್ಞಾನ ವಿಭಾಗದ ಮುಖ್ಯಸ್ಥೆ ಸೌಮ್ಯ ನಾಯಕ್  ಸ್ವಾಗತಿಸಿದರು, ವಿದ್ಯಾರ್ಥಿ ಡೆಜ್ಲರ್ ನಿರೂಪಿಸಿದರು. ಪೀಟರ್ ಬಿರ್ಜಿ ವಂದಿಸಿದರು.