ಚಿಂತೆಯಿಂದ ದೂರವಾಗಲು ಏಕಾಗ್ರತೆ ಅಗತ್ಯ: ಯೋಗಿನಿ ಅಕ್ಕ
ಲೋಕದರ್ಶನ ವರದಿ
ಕೊಪ್ಪಳ 28: ಸಮಾಜದಲ್ಲಿ ಇಂದು ಮನುಷ್ಯರು ದುಃಖ, ಅಶಾಂತಿ, ಚಿಂತೆಯಿಂದ ದೂರವಾಗಲು ಸುಖ, ಶಾಂತಿಯ ಸಾಗರನಾದ ಪರಮಾತ್ಮನ ಕಡೆಗೆ ಮನಸ್ಸು ಬುದ್ಧಿಯನ್ನು ಏಕಾಗ್ರಗೊಳಿಸುವುದು ಅತ್ಯಂತ ಅಗತ್ಯವಿದೆ ಎಂದು ಬ್ರಹ್ಮಕುಮಾರಿ ಯೋಗಿನಿ ಅಕ್ಕನವರು ಹೇಳಿದರು.
ನಗರದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಹಮ್ಮಿಕೊಂಡಿದ್ದ ಶ್ರಾವಣ ಮಾಸದ ಪ್ರಯುಕ್ತ ವಿಶ್ವ ಶಾಂತಿಗಾಗಿ "ಓಂ ನಮಃ ಶಿವಾಯ ಪಾದಯಾತ್ರೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
"ಓಂ" ಎಂದರೆ ಈ ಶರೀರದ ಮಾಲೀಕನಾದ ಆತ್ಮ ನಾನು ಜ್ಯೋತಿ ಸ್ವರೂಪನಾಗಿದ್ದೇನೆ. ಜನನ ಮರಣ ಚಕ್ರದಲ್ಲಿ ಬರುವ ಆತ್ಮ ನಾನು ಈ ಶರೀರದ ಮೂಲಕ ಕೆಲಸ ಮಾಡಿಸುವವನಾಗಿದ್ದೇನೆ.
"ನಮಃ" ಎಂದರೆ ನಮಸ್ಕರಿಸುತ್ತಿದ್ದೇನೆ, "ಶುಭಂ ಕರೋತಿ ಇತಿ ಶಿವಃ" ಸರ್ವ ಆತ್ಮರಿಗೂ ಶುಭವನ್ನು ಮಂಗಳವನ್ನು ಮಾಡುವ ಪರಮಾತ್ಮ ಶಿವನಿಗೆ ನಮಸ್ಕರಿಸುತ್ತಿದ್ದೇನೆ ಎಂದರ್ಥ ಎಂದರು.
ಬ್ರಹ್ಮಕುಮಾರ ಬ್ರಹ್ಮಕುಮಾರಿಯರು ಶ್ವೇತವಸ್ತ್ರಧಾರಿಗಳಾಗಿ ಶಿವ ಧ್ವಜವನ್ನು ಹಿಡಿದು ಸಾಗಿದ ದೃಶ್ಯ ಎಲ್ಲರ ಮನಸ್ಸನ್ನು ಪರಮಾತ್ಮನ ಕಡೆಗೆ ಕರೆದೊಯ್ದಿತು. ಈ ಪಾದಯಾತ್ರೆ ಅಶೋಕ ವೃತ್ತ, ಗಡಿಯಾರಕಂಬ, ಗವಿಮಠ ಗಂಜ್ ಸರ್ಕಲ್ನ ಮೂಲಕ ಈಶ್ವರೀಯ ವಿಶ್ವವಿದ್ಯಾಲಯವನ್ನು ತಲಿಪಿತು. ಈ ಪಾದಯಾತ್ರೆಯಲ್ಲಿ ನೂರಾರು ಜನ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 