ಉಚಿತ ಬೇಸಿಗೆ ರಜೆಯ ಶೈಕ್ಷಣಿಕ ಶಿಬಿರದ ಸಮಾರೋಪ
Conclusion of the free summer vacation educational camp
ಕಾಗವಾಡ, 24 : ಖಿದ್ಮತ್ ಫೌಂಡೇಶನ್ನವರು ಗ್ರಾಮದ 8, 9 ಮತ್ತು 10 ನೇ ತರಗತಿಯ ಕನ್ನಡ ಮತ್ತು ಉರ್ದು ವಿದ್ಯಾರ್ಥಿಗಳಿಗೆ ಬೇಸಿಗೆಯ ರಜೆಯಲ್ಲಿ ಉಚಿತ ಶೈಕ್ಷಣಿಕ ಶಿಬಿರ ಹಮ್ಮಿಕೊಂಡಿದ್ದು, ನಿಜಕ್ಕೂ ಶ್ಲಾಘನೀಯವಾಗಿದೆ ಎಂದು ಚಿಕ್ಕೋಡಿ ಸಿಬಿಕೆಎಸ್ಎಸ್ ಕಾರ್ಖಾನೆಯ ನಿರ್ದೇಶಕರು ಹಾಗೂ ಜುಗೂಳ ಪಿಕೆಪಿಎಸ್ನ ಅಧ್ಯಕ್ಷರು, ಮುಖಂಡ ಅಣ್ಣಾಸಾಬ ಪಾಟೀಲ ತಿಳಿಸಿದ್ದಾರೆ.
ಅವರು ಶುಕ್ರವಾರ ದಿ. 23 ರಂದು ತಾಲೂಕಿನ ಜುಗೂಳ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನ ಸಭಾಭವನದಲ್ಲಿ ಖಿದ್ಮತ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ ಬೇಸಿಗೆಯ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷರಾಗಿ ಭಾಗವಹಿಸಿ, ಮಾತನಾಡುತ್ತಿದ್ದರು.
ಅತಿಥಿಗಳಾಗಿ ಆಗಮಿಸಿದ್ದ ಗ್ರಾ.ಪಂ. ಸದಸ್ಯ ಅರುಣ ಗಣೇಶವಾಡಿ, ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ದುಬಾರಿಯಾಗಿದೆ. ಅಂತಹದ್ದರಲ್ಲಿ ಖಿದ್ಮತ್ ಫೌಂಡೇಶನ್ ಅವರು ಮಕ್ಕಳಿಗೆ ಉಚಿತ ಶಿಬಿರ ಹಮ್ಮಿಕೊಂಡು, ಮಕ್ಕಳ ಶಿಕ್ಷಣ ಗುಣಮಟ್ಟ ವೃದ್ಧಿಸಲು ಶ್ರಮಿಸುತ್ತಿರುವುದು ಅಭಿನಂದನೀಯವಾಗಿದೆ. ಅವರು ಸಮಾಜ ಮುಖಿ ಕಾರ್ಯಕ್ರಮಗಳಿಗೆ ಗ್ರಾಮದ ಮುಖಂಡರು ಸದಾ ಸಾಥ ನೀಡಲಿದ್ದೇವೆ ಎಂದರು.
ಈ ವೇಳೆ ಗ್ರಾ.ಪಂ.ಅಧ್ಯಕ್ಷ ಕಾಕಾಸಾಬ ಪಾಟೀಲ, ಮುಖಂಡರಾದ ಅನೀಲ ಕಡೋಲೆ ಉಮೇಶ ಪಾಟೀಲ, ದಯಾನಂದ ಮಿಣಚೆ, ಸುರೇಶ ಪಾಟೀಲ, ಯಾಶಿನ ಜಮಾದರ, ಅನ್ವರ ಶಿರಗುಪ್ಪೆ, ಖಿದ್ಮತ್ ಫೌಂಡೇಶನ್ನ ಅಧ್ಯಕ್ಷ ಮೌಲಾ ಮುಜಾವರ, ಉಪಾಧ್ಯಕ್ಷ ರಮಜಾನ ಮೋದಿನ ಸೇರಿದಂತೆ ಸದಸ್ಯರು, ಗ್ರಾಮಸ್ಥರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 