ಗದಗ ನಗರದಲ್ಲಿ ಜೂನ್ 20 ರಂದು ಸ್ಲಂ ಜನಾಂದೋಲನ-ಕರ್ನಾಟಕದಿಂದ ರಾಜ್ಯ ಪ್ರತಿನಿಧಿಗಳ ಸಮ್ಮೇಳನ

ಗದಗ ನಗರದಲ್ಲಿ ಜೂನ್ 20 ರಂದು ಸ್ಲಂ ಜನಾಂದೋಲನ-ಕರ್ನಾಟಕದಿಂದ ರಾಜ್ಯ ಪ್ರತಿನಿಧಿಗಳ ಸಮ್ಮೇಳನ Conference of state representatives from Slum People's Movement-Karnataka on June 20 in Gadag city

ಲೋಕದರ್ಶನ ವರದಿ 

ಗದಗ-17, ಸರ್ವಜನಾಂಗದ ಶಾಂತಿಯ ತೋಟ ಸಾಮಾಜಿಕ ನ್ಯಾಯ ಮತ್ತು ಗ್ಯಾರಂಟಿ ಯೋಜನೆಗಳ ನೆರವಿನೊಂದಿಗೆ ಪೂರ್ಣ ಬಹುಮತದೊಂದಿಗೆ ಕಾಂಗ್ರೇಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬಂದು ಮೂರು ವರ್ಷಗಳು ಕಳೆದು ಮುಖ್ಯಮಂತ್ರಿ ಬದಲಾವಣೆಯಾಗಿ ಅಧಿಕಾರ ಹಸ್ತಾಂತರ ಕೂಡಾ ಮುಗಿದು ಹೊಯಿತು. ಆದರೆ ಕಳೆದ ಮೂರು ವರ್ಷಗಳ ಹಿಂದೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಲಂ ಜನರಿಗೆ ನೀಡಿದ ಭರವಸೆಗಳ ಈಡೇರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸ್ಲಂ ಜನಾಂದೋಲನ-ಕರ್ನಾಟಕ ರಾಜ್ಯ ಸಂಚಾಲಕ ಎ.ನರಸಿಂಹಮೂರ್ತಿ ಆಕ್ರೋಶ ವ್ಯಕ್ತ ಪಡಿಸಿದರು.