ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ
ಮಂಗಳೂರು, ಮೇ 6, ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ. ಸರಕಾರಿ ಆದೇಶದಂತೆ, ಅರ್ಹರಿರುವ ಕೈಗಾರಿಕೆಗಳು, ಐಟಿ/ಐಟಿಇಎಸ್ ಕಂಪನಿಗಳು, ಡಾಟಾ/ಕಾಲ್ ಸೆಂಟರ್ಗಳು, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್ ಸರ್ವಿಸಸ್, ಇಂಕ್ಯೂಬರೇಟರ್ಗಳು ಹಾಗೂ ಇನ್ನಿತರ ಕಂಪೆನಿಗಳು ಕಾರ್ಯನಿರ್ವಹಿಸುವ ಬಗ್ಗೆ ಆನ್ಲೈನ್ನಲ್ಲಿ ಸ್ವಯಂ ದೃಢೀಕರಣ ಸಲ್ಲಿಸಿದ ನಂತರ ಘಟಕ ಪ್ರಾರಂಭಿಸಬಹುದಾಗಿದೆ. ಈಗಾಗಲೇ ಪ್ರಾರಂಭಿಸಿರುವ ಘಟಕಗಳು ಸಹ ಈ ಲಿಂಕ್ ಮೂಲಕ ಸ್ವಯಂ ದೃಢೀಕರಣ ಸಲ್ಲಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಾಣು ಕಾಯಿಲೆ 2019)ರ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸರಕಾರದ ಆದೇಶದಲ್ಲಿ ನೀಡಿದ ಸಡಿಲಿಕೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರನ್ವಯ ಮೇ 4 ರಿಂದ 17 ರವರೆಗೆ ಪ್ರತಿ ದಿನ ಸಂಜೆ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ನಿಷೇಧಾಜ್ಞೆಯನ್ನು ವಿಧಿಸಿ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶಿಸಿದ್ದಾರೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 