ಕಾಗರ್ಿಲ್ ವಿಜಯೋತ್ಸವ ಹಾಗೂ ಶಾಸಕರಿಗೆ ಸತ್ಕಾರ.
ತಾಲೂಕಾ ಅಂಜುನ್ ಪ್ರೌಢಶಾಲೆಯ ಕಾಗರ್ಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಸತ್ಕರಿಸಲಾಯಿ
ರಾಮದುರ್ಗ: ಪ್ರತಿಯೊಂದು ಮಗುವಿನಲ್ಲಿ ದೇಶಾಭಿಮಾನ ಬೆಳೆಸಿ, ಪೋಷಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಅದನ್ನರಿತು ಶಿಕ್ಷಕರು ಮಕ್ಕಳಲ್ಲಿ ಸುಸಂಸ್ಕೃತಿ ಬೆಳೆಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕೆಂದು ಶಾಸಕ ಮಹಾದೇವಪ್ಪ ಯಾದವಾಡ ಕರೆ ನೀಡಿದರು.
ಪಟ್ಟಣದ ತಾಲೂಕಾ ಅಂಜುಮನ್ ಪ್ರೌಢಶಾಲೆಯಲ್ಲಿ ಶುಕ್ರವಾರ ಸಂಜೆ ಹಮ್ಮಿಕೊಂಡ ಕಾಗರ್ಿಲ್ ವಿಜಯೋತ್ಸವ ಹಾಗೂ ಸತ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರತಿಯೊಂದು ಮಗು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಪಾಲಕರು ಹಾಗೂ ಶಿಕ್ಷಕ ಮೇಲಿದೆ. ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಶಾಲೆಯ ಪ್ರಗತಿಗೆ ಪೂರಕವಾದ ಯೋಜನೆಗಳನ್ನು ಹಾಕಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುಂತಾಗಲು ಶ್ರಮಿಸಿದಾಗ ಮಾತ್ರ ಸಂಸ್ಥೆಯ ಪ್ರಗತಿ ಸಾಧ್ಯವೆಂದರು.
ಶಾಲಾ ಮುಖ್ಯೋಪಾಧ್ಯಾಯ ಡಿ. ಬಿ. ಬಾಣಿ ಮಾತನಾಡಿ, ದೇಶ ಕಾಯುವ ಸೈನಿಕರಿಂದಲೇ ಇಂದು ನಾವೆಲ್ಲರೂ ನೆಮ್ಮದಿಯಿಂದ ಬದುಕುವಂತಾಗಿದೆ. ಅವರಿಗೆ ಗೌರವ ಸಮಪರ್ಿಸುವುದು ಪ್ರತಿಯೊಬ್ಬರ ಕರ್ತವ್ಯ. ಆ ನಿಟ್ಟಿನಲ್ಲಿ ವಿದ್ಯಾಥರ್ಿಗಳು ದೇಶಾಭಿಮಾನ ಬೆಳೆಸಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಸಂಸ್ಥೆಯ ಪರವಾಗಿ ಸತ್ಕರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ ಎಂ. ಐ. ಶಿರಗಾಪೂರ ಕಾರ್ಯದಶರ್ಿ ಬಿ. ಆರ್. ಬೈರಕದಾರ ಸೇರಿದಂತೆ ಶಾಲಾ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಶಿಕ್ಷಕಿ ಎಸ್. ವ್ಹಿ. ಸರಕಾಜಿ ನಿರೂಪಿಸಿದರು. ಶಿಕ್ಷಕ ಎಚ್. ಎಚ್. ಧಾರವಾಡ ವಂದಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 