ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಬೈಕ್ ರಾ್ಯಲಿ
Congress Foundation Day Celebration: Bike Rally
ಹಾನಗಲ್ 14: ಅಖಿಲ ಭಾರತ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಬೈಕ್ ರಾ್ಯಲಿ ಆಯೋಜಿಸಲಾಗಿತ್ತು.
ಇಲ್ಲಿನ ತಾಲೂಕಾ ಕ್ರೀಡಾಂಗಣದ ಬಳಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ ರಾ್ಯಲಿಗೆ ಚಾಲನೆ ನೀಡಿ, ಯುವಜನರಲ್ಲಿ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಶ್ರಮ ವಹಿಸುವ ಅಗತ್ಯವಿದೆ. ಹಲವು ದಶಕಗಳಿಂದ ಯುವ ಕಾಂಗ್ರೆಸ್ ಹತ್ತು, ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸಾಮಾಜಿಕ ಪರಿವರ್ತನೆಗೆ ಯುವಕರು ದೃಢಸಂಕಲ್ಪ ಗೈಯ್ಯಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಓಡಿಸಬೇಕು ಎನ್ನುವ ಉದ್ದೇಶದಿಂದ 300 ಹೆಲ್ಮೆಟ್ ವಿತರಿಸಿ, ಜಾಗೃತಿ ಮೂಡಿಸಲಾಯಿತು. ಮುಖ್ಯರಸ್ತೆ ಮಾರ್ಗವಾಗಿ ರಾ್ಯಲಿ ಡಾ.ಬಾಬು ಜಗಜೀವನರಾಂ ಭವನ ತಲುಪಿತು. ಬಳಿಕ ಅಲ್ಲಿ ಯುವ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಲಾಯಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದರ್ಶನ ಲಮಾಣಿ, ಉಪಾಧ್ಯಕ್ಷರಾದ ಶಿವು ತಳವಾರ, ಪ್ರಸನ್ನ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಮಡಿವಾಳರ, ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ, ಬ್ಲಾಕ್ ಅಧ್ಯಕ್ಷರಾದ ಪ್ರವೀಣ ಹಿರೇಮಠ, ಬಾಬು ನಿಕ್ಕಂ ಸೇರಿದಂತೆ ಅನೇಕರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 