ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಬೈಕ್ ರಾ್ಯಲಿ
Congress Foundation Day Celebration: Bike Rally
ಹಾನಗಲ್ 14: ಅಖಿಲ ಭಾರತ ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಇಲ್ಲಿ ಯುವ ಕಾಂಗ್ರೆಸ್ ವತಿಯಿಂದ ಬೃಹತ್ ಬೈಕ್ ರಾ್ಯಲಿ ಆಯೋಜಿಸಲಾಗಿತ್ತು.
ಇಲ್ಲಿನ ತಾಲೂಕಾ ಕ್ರೀಡಾಂಗಣದ ಬಳಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಅಬ್ದುಲ್ ದೇಸಾಯಿ ರಾ್ಯಲಿಗೆ ಚಾಲನೆ ನೀಡಿ, ಯುವಜನರಲ್ಲಿ ದೇಶಭಕ್ತಿ, ಸಾಮಾಜಿಕ ಜವಾಬ್ದಾರಿ ಬೆಳೆಸುವಲ್ಲಿ ಶ್ರಮ ವಹಿಸುವ ಅಗತ್ಯವಿದೆ. ಹಲವು ದಶಕಗಳಿಂದ ಯುವ ಕಾಂಗ್ರೆಸ್ ಹತ್ತು, ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಸಾಮಾಜಿಕ ಪರಿವರ್ತನೆಗೆ ಯುವಕರು ದೃಢಸಂಕಲ್ಪ ಗೈಯ್ಯಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ಬೈಕ್ ಓಡಿಸಬೇಕು ಎನ್ನುವ ಉದ್ದೇಶದಿಂದ 300 ಹೆಲ್ಮೆಟ್ ವಿತರಿಸಿ, ಜಾಗೃತಿ ಮೂಡಿಸಲಾಯಿತು. ಮುಖ್ಯರಸ್ತೆ ಮಾರ್ಗವಾಗಿ ರಾ್ಯಲಿ ಡಾ.ಬಾಬು ಜಗಜೀವನರಾಂ ಭವನ ತಲುಪಿತು. ಬಳಿಕ ಅಲ್ಲಿ ಯುವ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸಲಾಯಿತು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ದರ್ಶನ ಲಮಾಣಿ, ಉಪಾಧ್ಯಕ್ಷರಾದ ಶಿವು ತಳವಾರ, ಪ್ರಸನ್ನ ಹಿರೇಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಮಡಿವಾಳರ, ತಾಲೂಕಾಧ್ಯಕ್ಷ ಸಂತೋಷ ದುಂಡಣ್ಣನವರ, ಬ್ಲಾಕ್ ಅಧ್ಯಕ್ಷರಾದ ಪ್ರವೀಣ ಹಿರೇಮಠ, ಬಾಬು ನಿಕ್ಕಂ ಸೇರಿದಂತೆ ಅನೇಕರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 