ಕಾಂಗ್ರೆಸ್ ನಾಯಕ ಜಜಾಡಿಯಾ ಎನ್ಸಿಪಿ ಸೇರ್ಪಡೆ
ಭಾವನಗರ, ಜನವರಿ 25,ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಭಾವನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ (ಎಪಿಎಂಸಿ) ಮಾಜಿ ಅಧ್ಯಕ್ಷ ಭಿಖಾಭಾಯ್ ಜಜಾಡಿಯಾ ಶನಿವಾರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ (ಎನ್ಸಿಪಿ) ಸೇರ್ಪಡೆಗೊಂಡರು.
ಪಕ್ಷದ ರಾಜ್ಯ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಶಂಕರ್ಸಿಂಘ್ ವಘೇಲಾ ಅವರ ಸಮ್ಮುಖದಲ್ಲಿ ರೈತ ಮುಖಂಡ ಜಜಾಡಿಯಾ ಅವರು ಎನ್ಸಿಪಿಗೆ ಸೇರಿದರು. ಎನ್ಸಿಪಿ ಬಾವುಟ ಮತ್ತು ಶಾಲು ಹಾಕಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಜಜಾಡಿಯಾ ಅವರೊಂದಿಗೆ ಇತರ ಕೆಲವು ಸ್ಥಳೀಯ ಕಾಂಗ್ರೆಸ್ ನಾಯಕರು ಎನ್ಸಿಪಿಗೆ ಸೇರ್ಪಡೆಯಾದರು.
ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗದ ಶಕ್ತಿಸಿನ್ಹ ಗೋಹಿಲ್, ಭಾರತ್ ಸಿನ್ಹ ಸೋಲಂಕಿ, ಅರ್ಜುನ್ ಮೋದ್ವಾಡಿಯಾ ಮತ್ತು ಸಿದ್ಧಾರ್ಥ್ ಪಟೇಲ್ ಅವರಂತಹ ನಾಯಕರಿಗೆ ಗುಜರಾತ್ನಲ್ಲಿ ಪಕ್ಷದ ಚುಕ್ಕಾಣಿ ನೀಡಿದ್ದರಿಂದ ಕಾಂಗ್ರೆಸ್ ನಾಯಕತ್ವದ ಬಗ್ಗೆ ನಿರಾಶೆಯಾಗಿದೆ ಎಂದು ಜಜಾಡಿಯಾ ಹೇಳಿದರು.ಈ ಸಂದರ್ಭದಲ್ಲಿ ಗುಜರಾತ್ನ ಎನ್ಸಿಪಿ ಕಾರ್ಯಕಾರಿ ಅಧ್ಯಕ್ಷ ಬಾಬಲ್ದಾಸ್ ಪಟೇಲ್ ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 