ಜಲಮೂಲಗಳ ಸಂರಕ್ಷಣೆ ನಮ್ಮ ಮೊದಲ ಆದ್ಯತೆ
ಲೋಕದರ್ಶನ ವರದಿ
ಬೆಳಗಾವಿ 12: ಮುಂದಿನ ಪೀಳೀಗೆಗೆ ನಾವು ನೀರಿನ ಸಂರಕ್ಷಣೆ, ಸಮುದಾಯದ ನೈರ್ಮಲ್ಯ, ಬಗ್ಗೆ ಜಾಗೃತಿ ಮೂಡಿಸುವುದು ಮಹತ್ವವಾಗಿದ್ದು ಹಾಗೂ ಜಲಮೂಲಗಳು ಕಲುಸಿತವಾಗಿದೆ ಹಾಗೆ ನೋಡಿಕೊಂಡು ಅವುಗಳ ಸಂರಕ್ಷಣೆ ಹಾಗೂ ಪುನಶ್ಚೇತನಗೊಳಿಸುವುದು ನಮ್ಮ ಮೊದಲು ಆದ್ಯತಯಾಗಬೇಕು ಎಂದು ಗ್ರಾಮಿಣ ಕುಡಿಯುವ ನೀರು ನೈರ್ಮಲ್ಯ ವಿಭಾಗ ಬೆಳಗಾವಿ ಕಾರ್ಯಪಾಲಕ ಅಭಿಯಂತರಾದ ಕೆ.ಎಸ್.ಅಸೊಟಿ ಕರೆ ನೀಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಬೆಳಗಾವಿ ಜಿಲ್ಲಾ ಪಂಚಾಯತಿ ಬೆಳಗಾವಿ, ಯುನೈಟೆಡ ಸಮಾಜ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಕಾರಲಗಾ ಗ್ರಾಮ ಪಂಚಾಯತಿ ಸಂಯುಕ್ತ ಆಶ್ರಯದಲ್ಲಿ ಖಾನಾಪುರ ತಾಲೂಕಿನ ಕಾರಲಗಾ ಗ್ರಾಮದ ಸಣ್ಣ ಜಲಮೂಲ (ಕೆರೆ) ಪುನಶ್ಚೇತನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಲ್ಲಾ ಪಂಚಾಯತ ಸದಸ್ಯರಾದ ಸುಪ್ರೀಯಾ ಗೊಪಾಲ ಕುಟ್ರೆ ಇವರು ಭೂಮಿ ಪೂಜೆ ನೇರವೇರಿಸಿದರು. ಗ್ರಾ. ಪಂ. ಅದ್ಯಕ್ಷರಾದ ಬಲರಾಮ ಗುರವ, ಉಪಾದ್ಯಕ್ಷರಾದ ಇಂದಿರಾ ಡಿ ಪಾಟಿಲ, ಸದಸ್ಯರಾದ ರಾಮ ಕಡೋಲ್ಕರ, ಸಹಾಯಕ ಕಾರ್ಯಪಾಲಕ ಅಭಿಯಂತರಾದ ಸುಭಾಶ ನಾಯ್ಕ, ಕಿರಣ ಕಣ್ಣೂರ್ಕರ, ಹಿರಿಯ ಭೂಗರ್ಭ ತಜ್ಞ ಎಸ್ ಜಿ ಜೋಶಿ, ಶಾತಾಬಾಯಿ ಕೋಲಕಾರ ಗ್ರಾ ಪಂ ಸದಸ್ಯರು ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ ತಾವನಪ್ಪಾ ಲವಗಿ, ಗ್ರಾ ಪಂ ಕುಡಿಯುವ ನೀರು ಹಾಗೂ ನೈಮರ್ುಲ್ಯ ಸಮಿತಿ ಸದಸ್ಯರು, ಸ್ವ-ಸಹಾಯ ಸಂಘದ ಸದಸ್ಯರು ಉಪಸ್ಥತರಿದ್ದರು, ಶ್ರಮಧಾನದ ಮೂಲಕ ಕರೆ ಸ್ವಚ್ಛತಾಕಾರ್ಯ ಮಾಡಲಾಯಿತು.
ಪಿ.ಆರ್.ಎ ಮೂಲಕ ಜಲ ಮೂಲಗಳ ಸಂರಕ್ಷಣೆ ಬಗ್ಗೆ ಸಂಸ್ಥೆ ಎಂ.ಕೆ.ಕುಂದರಗಿ ಮಾಹಿತಿ ನಿಡಿದರು. ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 