ಸಂವಿಧಾನ ದಿನ : ವಿಶೇಷ ಸಂಸತ್ ಅಧಿವೇಶನ
ನವದೆಹಲಿ, 26 ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 70 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ವಿಶೇಷ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಅಧಿವೇಶನವನ್ನು ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕಲಾಪದಿಂದ ದೂರ ಉಳಿಯಲು ನಿಧಾರ್ ಮಾಡಿವೆ. ಸೋಮವಾರ ಇದೇ ವಿಚಾರ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಸ್ತಾಪವಾಗಿ ಕಲಾಪವನ್ನು ನುಂಗಿ ಹಾಕಿತ್ತು. ಪದೇ ಪದೇ ಗದ್ದಲ, ಕೋಲಾಹಲದ ಕಾರಣ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು. ಇಂದಿನ ವಿಶೇಷ ಅಧಿವೇಶನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿಲರ್ಾ ಸಹ ಭಾಗಿಯಾಗಲಿದ್ದಾರೆ. ಸಂವಿಧಾನ ದಿನದ ಅಂಗವಾಗಿ ವರ್ಷವಿಡೀ ಹಲವಾರು ಕಾರ್ಯಕ್ರಮಗಳನ್ನು ದೇಶದ ಉದ್ದಗಲಕ್ಕೂ ಹಮ್ಮಿಕೊಳ್ಳಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 