ಸಂವಿಧಾನ ದಿನ : ವಿಶೇಷ ಸಂಸತ್ ಅಧಿವೇಶನ
ನವದೆಹಲಿ, 26 ದೇಶದಲ್ಲಿ ಸಂವಿಧಾನ ಜಾರಿಗೆ ಬಂದು 70 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸಂಸತ್ತಿನ ಜಂಟಿ ವಿಶೇಷ ಅಧಿವೇಶನ ಉದ್ದೇಶಿಸಿ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಭಾಷಣ ಮಾಡಲಿದ್ದಾರೆ. ಸಂಸತ್ತಿನ ಕೇಂದ್ರ ಸಭಾಂಗಣದಲ್ಲಿ ನಡೆಯಲಿರುವ ಅಧಿವೇಶನವನ್ನು ಅವರು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಕಲಾಪದಿಂದ ದೂರ ಉಳಿಯಲು ನಿಧಾರ್ ಮಾಡಿವೆ. ಸೋಮವಾರ ಇದೇ ವಿಚಾರ ಸಂಸತ್ತಿನ ಎರಡೂ ಸದನಗಳಲ್ಲಿ ಪ್ರಸ್ತಾಪವಾಗಿ ಕಲಾಪವನ್ನು ನುಂಗಿ ಹಾಕಿತ್ತು. ಪದೇ ಪದೇ ಗದ್ದಲ, ಕೋಲಾಹಲದ ಕಾರಣ ಉಭಯ ಸದನಗಳ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು. ಇಂದಿನ ವಿಶೇಷ ಅಧಿವೇಶನದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು, ಲೋಕಸಭೆಯ ಸ್ಪೀಕರ್ ಓಂ ಬಿಲರ್ಾ ಸಹ ಭಾಗಿಯಾಗಲಿದ್ದಾರೆ. ಸಂವಿಧಾನ ದಿನದ ಅಂಗವಾಗಿ ವರ್ಷವಿಡೀ ಹಲವಾರು ಕಾರ್ಯಕ್ರಮಗಳನ್ನು ದೇಶದ ಉದ್ದಗಲಕ್ಕೂ ಹಮ್ಮಿಕೊಳ್ಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 