ಸಂವಿಧಾನ ದಿನಾಚರಣೆ
Constitution Day Celebration
ಧಾರವಾಡ 26: ಧಾರವಾಡ ಗ್ರಾಮೀಣ ಕ್ಷೇತ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ "ಸಂವಿಧಾನ ದಿನಾಚರಣೆ " ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಮಾತನಾಡುತ್ತಾ ನವೆಂಬರ್ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಪ್ರತಿ ಭಾರತೀಯನಿಗೂ ಸಮಾನತೆಯ ಹಕ್ಕು, ಮುಕ್ತವಾಗಿ ಬದುಕುವ ಹಕ್ಕು ಮತ್ತು ಸ್ವಂತ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನೀಡುವ ದಾಖಲೆಯನ್ನು ರಚಿಸಿದ ದಿನ ಇದಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನು ರೂಪಿಸುವ ಕರ್ತವ್ಯಗಳೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆಯೂ ಕರೆ ನೀಡಿದರು.
ಕೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್, ಮಾತನಾಡಿ ನಮ್ಮ ಸಂವಿಧಾನದ ರಚನೆಕಾರರ ದೃಷ್ಟಿಕೋನ, ಸುಧಾರಣೆಗಳನ್ನು ಪ್ರತಿಬಿಂಬಿಸುತ್ತವೆ ಮತ್ತು ವಿಕಸಿತ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು. ನಾಗರಿಕರ ಹಕ್ಕುಗಳನ್ನು ಸುರಕ್ಷಿತಗೊಳಿಸಲು ಸಂವಿಧಾನ ನಿರ್ಮಾತೃಗಳು ಸಂವಿಧಾನವನ್ನು ರೂಪಿಸಿದರು ಎಂದು ಅವರು ಹೇಳಿದರು.
ಇ.ಸಿ.ಓ, ಬಿ.ಆರ್.ಪಿ, ಸಿ.ಆರ್.ಪಿ, ಬಿ.ಐ.ಇ.ಆರ್.ಟಿ, ಬಿಇಓ ಹಾಗೂ ಬಿಆರಸಿ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 