ಸಂವಿಧಾನ ದಿನಾಚರಣೆ
Constitution Day Celebration
ಧಾರವಾಡ 26: ಧಾರವಾಡ ಗ್ರಾಮೀಣ ಕ್ಷೇತ ಶಿಕ್ಷಣಾಧಿಕಾರಿ ಕಾರ್ಯಾಲಯದಲ್ಲಿ "ಸಂವಿಧಾನ ದಿನಾಚರಣೆ " ಅಂಗವಾಗಿ ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ಸದಲಗಿ ಮಾತನಾಡುತ್ತಾ ನವೆಂಬರ್ 26 ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ದಿನ. ಪ್ರತಿ ಭಾರತೀಯನಿಗೂ ಸಮಾನತೆಯ ಹಕ್ಕು, ಮುಕ್ತವಾಗಿ ಬದುಕುವ ಹಕ್ಕು ಮತ್ತು ಸ್ವಂತ ನಿರ್ಧಾರ ತೆಗೆದುಕೊಳ್ಳುವ ಹಕ್ಕನ್ನು ನೀಡುವ ದಾಖಲೆಯನ್ನು ರಚಿಸಿದ ದಿನ ಇದಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನು ರೂಪಿಸುವ ಕರ್ತವ್ಯಗಳೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವಂತೆಯೂ ಕರೆ ನೀಡಿದರು.
ಕೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್, ಮಾತನಾಡಿ ನಮ್ಮ ಸಂವಿಧಾನದ ರಚನೆಕಾರರ ದೃಷ್ಟಿಕೋನ, ಸುಧಾರಣೆಗಳನ್ನು ಪ್ರತಿಬಿಂಬಿಸುತ್ತವೆ ಮತ್ತು ವಿಕಸಿತ ಭಾರತದ ಪ್ರಗತಿಗೆ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು. ನಾಗರಿಕರ ಹಕ್ಕುಗಳನ್ನು ಸುರಕ್ಷಿತಗೊಳಿಸಲು ಸಂವಿಧಾನ ನಿರ್ಮಾತೃಗಳು ಸಂವಿಧಾನವನ್ನು ರೂಪಿಸಿದರು ಎಂದು ಅವರು ಹೇಳಿದರು.
ಇ.ಸಿ.ಓ, ಬಿ.ಆರ್.ಪಿ, ಸಿ.ಆರ್.ಪಿ, ಬಿ.ಐ.ಇ.ಆರ್.ಟಿ, ಬಿಇಓ ಹಾಗೂ ಬಿಆರಸಿ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಭಾರತ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ ಪ್ರತಿಜ್ಞಾವಿಧಿ (ಪ್ರಮಾಣ ವಚನ) ಸ್ವೀಕರಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 