ಶ್ರೀನಿವಾಸ ಶಾಲೆಯಲ್ಲಿ ಸಂವಿಧಾನ ದಿನಾಚರಣೆ
ಲೋಕದರ್ಶನ ವರದಿ
ಮೂಡಲಗಿ 26: ಇಲ್ಲಿಯ ಶ್ರೀ ಶ್ರೀನಿವಾಸ ಸ್ಕೂಲ್ಸನಲ್ಲಿ ಇಂದು ಸಂವಿಧಾನ ದಿನಾಚರಣೆಯ ಪ್ರಯುಕ್ತವಾಗಿ ಕಾನೂನು ಸಾಕ್ಷರತಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಜೆಎಮ್ಎಫ್ಸಿ ಮೂಡಲಗಿಯ ಸಿವಿಲ್ ನ್ಯಾಯಾಧೀಶ ಸುರೇಶ ಎಸ್.ಎನ್., ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು. ಕಾನೂನು ಸಾಕ್ಷರತಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಭಾರತದ ಸಂವಿಧಾನ ರಚನೆಯಲ್ಲಿ ತೊಡಗಿಕೊಂಡ ಮಹನೀಯರನ್ನು ಸ್ಮರಿಸಿದರು. ವಿದ್ಯಾರ್ಥಿಗಳಿಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ಕುರಿತು ತಿಳಿಹೇಳಿದರು.
ವಿಶೇಷ ಉಪನ್ಯಾಸ ನೀಡಿದ ವಕೀಲರುಗಳಾದ ಎಮ್ ಐ ಬಡಿಗೇರ ಹಾಗೂ ಬಿ. ಎನ್ ಸಣ್ಣಕ್ಕಿ ವಿದ್ಯಾರ್ಥಿಗಳಿಗೆ ಕಾನೂನು ಹಾಗೂ ಸಂವಿಧಾನದ ಕುರಿತು ವಿವರಿಸಿದರು. ಮೊಬೈಲ್, ಅಂತಜರ್ಾಲ ಹಾಗೂ ಅಪ್ರಾಪ್ತರು ವಾಹನ ಚಾಲನೆ ಮಾಡುವುದರಿಂದಾಗುವ ದುಷ್ಪರಿಣಾಮಗಳನ್ನು ವಿವರಿಸಿದರು.
ವಿದ್ಯಾರ್ಥಿ ರಮೇಶ ಬಡಗನ್ನವರ ಭಾರತದ ಸಂವಿಧಾನದ ಮಹತ್ವವನ್ನು ಕುರಿತು ಮಾತನಾಡಿದರು.
ಕೆ.ಪಿ. ಮಗದುಮ, ಎಸ್.ವೈ. ಹೊಸಟ್ಟಿ, ಡಿ ಎಸ್ ರೊಡ್ಡನ್ನವರ, ವಿ.ಕೆ. ಪಾಟೀಲ, ಕೆ.ಎಲ್ ಹುಣಿಶ್ಯಾಳ, ವಿ.ವಿ. ನಾಯ್ಕ, ಎ.ಎಚ್. ಗೊಡ್ಯಾಗೋಳ ಅತಿಥಿಗಳಾಗಿದ್ದರು. ಶಾಲೆಯ ಪ್ರಾಚಾರ್ಯರಾದ ಮನೋಜ ಭಟ್ ಅಧ್ಯಕ್ಷತೆವಹಿಸಿದ್ದರು. ಶರ್ಮಿಳಾ ಪ್ರಾರ್ಥನಾಗೀತೆ ಹಾಡಿದರು. ಕು. ಕಾವ್ಯಾ ಸ್ವಾಗತಿಸಿದರು. ಕು. ಚಂದ್ರಿಕಾ ನಿರೂಪಿಸಿದರು.
ತಾಲೂಕು ಕಾನೂನು ಸಮಿತಿ, ವಕೀಲರ ಸಂಘದ ವಿವಿಧ ಪದಾಧಿಕಾರಿಗಳು, ಶಾಲೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 