ಭಾರತ ದೇಶದ ಸಂವಿಧಾನ ವಿಶ್ವದಲ್ಲಿಯೇ ಅತ್ಯುತ್ತಮ ಸಂವಿಧಾನ: ಚೌಗುಲೆ
ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸುತ್ತಿರುವ ಗಣ್ಯರು.
ರಾಯಬಾಗ 26: ಭಾರತ ದೇಶದ ಸಂವಿಧಾನ ವಿಶ್ವದಲ್ಲಿಯೇ ಅತ್ಯುತ್ತಮ ಸಂವಿಧಾನ ಎನ್ನಿಸಿಕೊಂಡಿದೆ ಎಂದು ಹಿರಿಯ ವಕೀಲರಾದ ಎಲ್.ಬಿ.ಚೌಗುಲೆ ಹೇಳಿದರು.
ಮಂಗಳವಾರ ಪಟ್ಟಣದ ಭರಮಾ ಅಣ್ಣಪ್ಪ ಚೌಗಲೆ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಎಸ್.ಪಿ.ಎಮ್ ಕಾನೂನು ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಶಿಲ್ಪಿಗಳು ವಿಶ್ವದ ಎಲ್ಲ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ ಅಚ್ಚುಕಟ್ಟಾಗಿ ನಮ್ಮ ಸಂವಿಧಾನವನ್ನು ರಚಿಸಿದ್ದಾರೆ ಎಂದು ಹೇಳಿದರು.
ಎಸ್.ಪಿ.ಎಮ್. ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಎಸ್.ಎಸ್. ಕುರಬೇಟಿ ಮಾತನಾಡಿ, ಭಾರತದ ಸಂವಿಧಾನವನ್ನು ಅಂಗೀಕರಿಸಿದ ನೆನಪಿಗಾಗಿ ಪ್ರತಿ ವರ್ಷ ನವೆಂಬರ್ 26 ರಂದು ಭಾರತದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ ಎಂದರು. ಅಧ್ಯಕ್ಷತೆಯನ್ನು ಹಿರಾಬಾಯಿ ಭರಮಾ ಚೌಗಲೆ ಪದವಿ ಕಾಲೇಜಿನ ಪ್ರಾಚಾರ್ಯ ಎಸ್.ಎಸ್. ದಿಗ್ಗೆವಾಡಿ ವಹಿಸಿದ್ದರು. ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನಯ ಚೌಗಲೆ, ಉಪನ್ಯಾಸಕರಾದ ಪಿ.ಆರ್ ಸವದತ್ತಿ, ಆಯ್.ಆರ್ ಪತ್ತಾರ, ಎಮ್.ಆರ್ ಕಠಾರಿ, ಸುರೇಶ ಶಿಂಧೆ, ಕುಮಾರ ಭಜಂತ್ರಿ, ಪಿ ಡಿ ಲಂಗೋಟಿ, ಜಿ.ಡಿ. ಪೂಜಾರಿ, ಕಾವೇರಿ ಪಾಟೀಲ, ಎ.ವಿ ಪಾಟೀಲ, ಆಶಾ ಕಾಂಬಳೆ, ಪಿ.ಎಸ್ ಕಾಳೆ, ರಾಮು ಕಾಕಡೆ ಹಾಗೂ ವಿದ್ಯಾರ್ಥಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 