ಶಾಲಾ ವಿದ್ಯಾರ್ಥಿಗಳಿಗೆ 26 ರಿಂದ ಸಂವಿಧಾನ ಪಠಣ ಕಡ್ಡಾಯ
ಮುಂಬೈ, ಜನವರಿ 23,ಗಣರಾಜ್ಯ ದಿನವಾದ ಇದೇ 26 ರಿಂದ ಮಹಾರಾಷ್ಟ್ರದ ಶಾಲಾ ವಿದ್ಯಾರ್ಥಿಗಳು ಬೆಳಗಿನ ಸಭೆಯಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ಕಡ್ಡಾಯವಾಗಿ ಓದಬೇಕು ಎಂದು ಶಾಲಾ ಶಿಕ್ಷಣ ಸಚಿವೆ ವರ್ಷಾ ಗಾಯಕ್ವಾಡ್ ಕಟ್ಟಪ್ಪಣೆ ಮಾಡಿದ್ದಾರೆ. ಸಂವಿಧಾನದ ಪ್ರಸ್ತಾವನೆ ಓದುವುದು ಸಂವಿಧಾನದ ಸಾರ್ವಭೌಮತೆ, ಸರ್ವರ ಒಳಿತು, ಕಲ್ಯಾಣ ಅಭಿಯಾನದ ಒಂದು ಭಾಗವಾಗಿದೆ ಎಂದೂ ಸರಕಾರದ ಸುತ್ತೋಲೆ ಸ್ಪಷ್ಟಪಡಿಸಿದೆ. ಶಾಲೆಯಲ್ಲಿ ಪ್ರತಿದಿನ ಬೆಳಗಿನ ಪ್ರಾರ್ಥನೆ ಮುಗಿದ ನಂತರ ವಿದ್ಯಾರ್ಥಿಗಳು ಸಂವಿಧಾನದ ಪ್ರಸ್ತಾವನೆ ಓದಬೇಕು. ಇದರಿಂದ ಅವರಿಗೆ ಸಂವಿಧಾನದ ಪ್ರಾಮುಖ್ಯತೆ ಅರಿವಾಗಲಿದೆ ಇದು ಹಿಂದಿನ ಸರಕಾರ ನಿರ್ಣಯ. ಆದರೆ, ನಾವು ಇದನ್ನು 26ರಿಂದ ಜಾರಿಗೆ ತರುತ್ತಿದ್ದೇವೆ ಎಂದು ಅವರು ಹೇಳಿದರು.ಕಾಂಗ್ರೆಸ್-ಎನ್ಸಿಪಿ ಅಧಿಕಾರದ್ದಾಗ ಇದಕ್ಕೆ ಸಂಬಂಧಿಸಿದಂತೆ 2013ರ ಫೆಬ್ರವರಿಯಲ್ಲಿ ನಿರ್ಣಯ ಹೊರಡಿಸಲಾಗಿತ್ತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 