ನರೇಗಾದಡಿ ಹಳ್ಳಕ್ಕೆ ತಡೆಗೋಡೆ ನಿರ್ಮಾಣ
Construction of a retaining wall for the ravine under NREGA
ಲೋಕದರ್ಶನ ವರದಿ
ಕಾರವಾರ 21 :- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಿರಸಿ ತಾಲೂಕಿನ ಇಸಳೂರು ಗ್ರಾಮ ಪಂಚಾಯತ್ನ ಸಣ್ಣಕೇರಿ ಗ್ರಾಮದ ಧರ್ಮಾ ಹಳ್ಳಕ್ಕೆ 2024-25ನೇ ಸಾಲಿನಲ್ಲಿ ಅಂದಾಜು 3 ಲಕ್ಷ ವೆಚ್ಚದಲ್ಲಿ ಹಳ್ಳಕ್ಕೆ ಅಡ್ಡಲಾಗಿ ತಡೆಗೋಡೆ ನಿರ್ಮಿಸಲಾಗಿದೆ. ಇನ್ನೂ ಕಾಮಗಾರಿಯಲ್ಲಿ 138 ಮಾನವದಿನಗಳನ್ನು ಸೃಜಿಸಲಾಗಿದ್ದು, ಸಂಪೂರ್ಣ ತಡೆಗೋಡೆಯನ್ನು ಶಿಲೆಕಲ್ಲನ್ನು ಬಳಸಿ ಕಟ್ಟಲಾಗಿದ್ದು, ಸುವ್ಯವಸ್ಥಿತವಾದ ಭದ್ರತೆ ಒದಗಿಸಲಾಗಿದೆ.
ಅರೆಮಲೆನಾಡು ಭಾಗದಲ್ಲಿ ಸುರಿವ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಜಮೀನುಗಳಲ್ಲಿಯೂ ನೀರು ನುಗ್ಗುವುದು ಸರ್ವೇ ಸಾಮಾನ್ಯ ಹೀಗಾಗಿ ಇಲ್ಲಿನ ರೈತರಿಗೆ ಜಮೀನು ಸಂರಕ್ಷಣೆಗೆ ಆದ್ಯತೆ ನೀಡುವ ಕಾಮಗಾರಿಗಳಿಗೆ ಹೆಚ್ಚಿನ ಬೇಡಿಕೆ ನೀಡುತ್ತಾರೆ. ಅವರ ಬೇಡಿಕೆಗನುಗುಣವಾಗಿ ಕಾಮಗಾರಿ ನೀಡಲಾಗುತ್ತಿದೆ ಎಂದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯವೀರ್ ಭಟ್ ತಿಳಿಸಿದರು.
ಮನೆಯ ಪಕ್ಕದಲ್ಲಿಯೇ ಹಳ್ಳ ಇರುವುದರಿಂದ ಪ್ರತಿ ಮಳೆಗಾಲದಲ್ಲಿಯೂ ನೀರಿನ ರಭಸಕ್ಕೆ ಭಯ ಕಾಡುತ್ತಿತ್ತು. ಆದು ಈಗಾ ಉದ್ಯೋಗ ಖಾತರಿ ಯೋಜನೆಯಡಿ ತಡೆಗೋಡೆ ನಿರ್ಮಿಸಿಕೊಟ್ಟಿದ್ದು ತುಂಬಾ ಅನುಕೂಲವಾಗಿದೆ ಎಂದು ರೈತ ಪ್ರಶಾಂತ್ ಭಟ್ ಸಂತಸ ವ್ಯಕ್ತಪಡಿಸಿದ್ದಾರೆ.
ನರೇಗಾ ಯೋಜನೆಯಡಿ ರೈತರಿಗೆ ಅನುಕೂಲವಾಗುವಂತಹ ಕಾಮಗಾರಿಗಳನ್ನು ನೀಡುವ ಮೂಲಕ ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಇಂತಹ ಕಾಮಗಾರಿಗಳು ಮಾದರಿಯಾಗುತ್ತಿವೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 