ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅಗತ್ಯವಿದೆ -ಡಾಆನಂದ ಕೆ

  ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅಗತ್ಯವಿದೆ -ಡಾಆನಂದ ಕೆ Consumption of cereals is necessary to build a healthy society - Dr. Anand K

            ವಿಜಯಪುರ ಜ.03 : ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಇವರ ಸಹಯೋಗದಲ್ಲಿ ಶನಿವಾರ ನಗರದ ಜ್ಞಾನಯೋಗಾಶ್ರಮದಲ್ಲಿ ಆಯೋಜಿಸಲಾದ ಸಿರಿಧಾನ್ಯ ನಡಿಗೆ (ವಾಕಥಾನ್) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಆನಂದ ಕೆ ಅವರು  ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಿರಿಧಾನ್ಯಗಳ ಬಳಕೆ ಅತ್ಯಗತ್ಯವಾಗಿದೆ.  ಸಿರಿಧಾನ್ಯ ಆಹಾರ ಬಳಕೆಮಾಡಬೇಕು. 

ಮಧುಮೇಹ, ರಕ್ತದೊತ್ತಡದಂತಹ ರೋಗಗಳಿಗೆ ಒಳಗಾಗುವುದನ್ನು ಕಾಣುತ್ತಿದ್ದೇವೆ ಇಂತಹ ರೋಗಗಳಿಂದ ದೂರ ಉಳಿಯಲು ಸಿರಿಧಾನ್ಯಗಳು ಅತ್ಯಂತ ಸಹಕಾರಿ ಆಗಿವೆ ಎಂದು ಹೇಳಿದರು.ನಮ್ಮ ಹಿರಿಯರ ಆಹಾರ ಪದ್ಧತಿಯಲ್ಲಿ ಪ್ರಮುಖ ಸ್ಥಾನ ಪಡೆದಿದ್ದ ಸಿರಿಧಾನ್ಯಗಳನ್ನು ಪುನಃ ದಿನನಿತ್ಯದ ಆಹಾರದಲ್ಲಿ ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಅವರು ತಿಳಿಸಿದರು. 

ಆರೋಗ್ಯಕರ ಆಹಾರ ಪದ್ಧತಿ ಹಾಗೂ ಸಿರಿಧಾನ್ಯಗಳ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ನಡಿಗೆಯನ್ನು ಆಯೋಜಿಸಲಾಗಿದೆ.ಸಿರಿಧಾನ್ಯಗಳು ಹೆಚ್ಚು ಪೋಷಕಾಂಶಗಳನ್ನು ಹೊಂದಿದ್ದು,ಕಡಿಮೆ ನೀರಿನಲ್ಲಿ ಬೆಳೆಯಬಹುದಾದ ಬೆಳೆಗಳಾಗಿವೆ.ಹವಾಮಾನ ಬದಲಾವಣೆ ಸವಾಲುಗಳನ್ನು ಎದುರಿಸುವಲ್ಲಿ ಸಿರಿಧಾನ್ಯಗಳು ರೈತರಿಗೆ ವರದಾನವಾಗಿವೆ. ಎಂದು ಜಿಲ್ಲಾಧಿಕಾರಿ ಹೇಳಿದರು. 

ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ ಅವರು ಸಿರಿಧಾನ್ಯಗಳ ಪೌಷ್ಟಿಕ ಮಹತ್ವ, ಉಪಯೋಗ ಹಾಗೂ  ಸಿರಿಧಾನ್ಯಗಳ ಬಳಕೆ ಹೆಚ್ಚಿದರೆ ರೈತರ ಆದಾಯವೂ ಹೆಚ್ಚುವುದರ ಜೊತೆಗೆ ಜನರ ಆರೋಗ್ಯವೂ ಉತ್ತಮವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. 

ಈ ಸಂದರ್ಭದಲ್ಲಿ ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮಿಜಿ, ವಿವಿಧ ಶಾಲಾಹಿಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಸಂಘಹಿಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಿರಿಧಾನ್ಯಗಳ ಮಹತ್ವ ಸಾರುವ ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಲಾಯಿತು. ನಡಿಗೆ ನಗರ ಪ್ರಮುಖ ರಸ್ತೆಗಳ ಮೂಲಕ ನಗರದ ಗಗನಮಹಲ್ ಆವರಣ   ಸಾಗಿತು. ಈ ಸಿರಿಧಾನ್ಯ ನಡಿಗೆ ಜಾಗೃತಿ ಅಭಿಯಾನವು ಸಾರ್ವಜನಿಕರ ಗಮನ ಸೆಳೆಯಿತು.